ಬ್ರೇಕಿಂಗ್ ನ್ಯೂಸ್
27-12-20 10:08 pm Headline Karnataka News Network ದೇಶ - ವಿದೇಶ
ಲಕ್ನೋ, ಡಿ.27: ಕೆಲವರಿಗೆ ವಾಹನಗಳಲ್ಲಿ ತಮ್ಮ ಹೆಸರು, ತಾಯಿ ಆಶೀರ್ವಾದ, ತಮ್ಮ ಜಾತಿಯ ಹೆಸರು, ಗೆಳೆಯ- ಗೆಳತಿಯರ ಹೆಸರು ಹೀಗೆ ಏನೇನೊ ಬರೆದುಕೊಳ್ಳುವುದು ಹವ್ಯಾಸ. ಸ್ಟಿಕ್ಕರ್ ಇಲ್ಲವೇ ನಂಬರ್ ಪ್ಲೇಟಲ್ಲೇ ತಮ್ಮ ಜಾತಕ ಬರೆದುಕೊಳ್ಳುವ ಮಂದಿಯೂ ಇದ್ದಾರೆ. ಆದರೆ, ಹೀಗೆ ಏನೆಲ್ಲಾ ಬರೆದುಕೊಳ್ಳುವ ಮಂದಿಗೆ ಅಂತಲೇ ಉತ್ತರ ಪ್ರದೇಶ ಸರಕಾರ ಹೊಸತೊಂದು ಕಾನೂನು ಜಾರಿ ಮಾಡಿದೆ.
ನೀವು ಏನೇ ಬರೆದುಕೊಳ್ಳಿ. ವಾಹನಗಳ ಮೇಲೆ ನಿಮ್ಮ ಜಾತಿಯನ್ನು ಸೂಚಿಸುವ ಪದಗಳನ್ನು ಅಥವಾ ಜಾತಿ ಹೆಸರನ್ನು ಬರೆದುಕೊಂಡಲ್ಲಿ ನಿಮ್ಮ ವಾಹನಗಳನ್ನೇ ಸೀಜ್ ಮಾಡಲಾಗುವುದು ಎಂದು ಯೋಗಿ ಸರಕಾರ ಆದೇಶ ಮಾಡಿದೆ. ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸಿ ಸುದ್ದಿಯಾಗಿರುವ ಉತ್ತರ ಪ್ರದೇಶ ಸರಕಾರ ಈಗ ವಾಹನದಲ್ಲಿ ಜಾತಿ ಬಳಸುವುದನ್ನು ನಿಷೇಧಿಸಿ ಆದೇಶ ಜಾರಿ ಮಾಡಿದೆ.

ಪ್ರಧಾನಿ ಕಚೇರಿಯಿಂದ ಬಂದ ಸೂಚನೆ ಮೇರೆಗೆ ಉತ್ತರ ಪ್ರದೇಶದ ಸರಕಾರ ಸಾರಿಗೆ ಇಲಾಖೆ ಮೂಲಕ ಈ ಕ್ರಮ ಕೈಗೊಂಡಿದೆ. ಸಾರಿಗೆ ಅಧಿಕಾರಿಗಳು ವಾಹನ ತಪಾಸಣೆ ಮಾಡುವ ವೇಳೆ ಜಾತಿ ಹೆಸರು ಕಂಡುಬಂದರೆ ಅಂಥ ವಾಹನಗಳನ್ನು ಮುಲಾಜಿಲ್ಲದೆ ಜಪ್ತಿ ಮಾಡಲು ಸಾರಿಗೆ ಇಲಾಖೆ ಆದೇಶ ಮಾಡಿದೆ.
ಇಂಥ ಸೂಚನೆ ಏಕಾಗಿ ?
ಉತ್ತರ ಪ್ರದೇಶದಲ್ಲಿ ಜಾಟ್, ಯಾದವ್, ಗುಜ್ಜಾರ್, ಬ್ರಾಹ್ಮಣ, ಪಂಡಿತ್, ಖತ್ರಿ, ಮೌರ್ಯ ಹೀಗೆ ತಮ್ಮ ತಮ್ಮ ಜಾತಿಗಳ ಹೆಸರುಗಳನ್ನು ವಾಹನಗಳಲ್ಲಿ ನಮೂದಿಸಿಕೊಂಡು ಸಾಮಾನ್ಯವಾಗಿದೆ. ಹೆಚ್ಚಿನ ಮಂದಿ ತಮ್ಮ ಜಾತಿಗಳನ್ನೇ ಪ್ರತಿಷ್ಠೆಯಾಗಿ ತೋರಿಸಲು ಹೆಸರಿನ ಜೊತೆಗೆ ಅಥವಾ ಖಾಲಿ ಜಾತಿ ಸೂಚಕ ಪದಗಳನ್ನೇ ವಾಹನಗಳಲ್ಲಿ ಬರೆದುಕೊಳ್ಳುತ್ತಾರೆ. ಉತ್ತರ ಪ್ರದೇಶದಲ್ಲಿ ಇದು ಸಾಮಾನ್ಯವಾಗಿದ್ದು, ಪ್ರತೀ 20 ವಾಹನಗಳಲ್ಲಿ ಒಂದರಲ್ಲಿ ಹೀಗೆ ಹೆಸರು ಬರೆದಿದ್ದು ಕಾಣಸಿಗುತ್ತದೆ.
ನಂಬರ್ ಪ್ಲೇಟ್, ವಾಹನದ ಗ್ಲಾಸ್ ಗಳಲ್ಲಿ ಹೀಗೆ ಹೆಸರು ಬರೆಯುವುದನ್ನು, ಸ್ಟಿಕ್ಕರ್ ಅಂಟಿಸುವುದನ್ನು ನಿಷೇಧಿಸಬೇಕು. ಇದರಿಂದ ಸಮಾಜದ ಸಾಮರಸ್ಯಕ್ಕೆ ಅಪಾಯ ಎಂದು ಶಿಕ್ಷಕ ಹರ್ಷಲ್ ಪ್ರಭು ಎಂಬವರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ಅದರಂತೆ, ಪ್ರಧಾನಿ ಕಚೇರಿಯಿಂದ ಉತ್ತರ ಪ್ರದೇಶ ಸರಕಾರಕ್ಕೆ ಸೂಚನೆ ಬಂದಿತ್ತು.
The fad of many people taking pride in ‘boldly’ displaying their caste identities on windscreens or number plates of their vehicles is gaining ground rapidly in Uttar Pradesh, the state where caste has always been pivotal to electoral politics.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm