ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am