ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm