ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm