ಬ್ರೇಕಿಂಗ್ ನ್ಯೂಸ್
09-10-25 12:12 pm HK News Desk ದೇಶ - ವಿದೇಶ
ಚೆನ್ನೈ, ಅ.9 : 20 ಪುಟಾಣಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಉತ್ಪಾದಕ ತಮಿಳುನಾಡು ಮೂಲದ ಸ್ರೀಸಾನ್ ಫಾರ್ಮಾಸ್ಯುಟಿಕಲ್ಸ್ ಕಂಪನಿ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಶ್ರೀಸನ್ ಫಾರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಂಪನಿಯ ಮಾಲೀಕ ರಂಗನಾಥನ್ ಅವರನ್ನು ಇಂದು ಬೆಳಗ್ಗೆ ಚೆನ್ನೈನಲ್ಲಿ ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದು ಭೋಪಾಲ್ ಒಯ್ದಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿ ಕನಿಷ್ಠ 20 ಮಕ್ಕಳು ಸಾವನ್ನಪ್ಪಿದ್ದು ಇದರ ಬೆನ್ನಲ್ಲೇ ಪೊಲೀಸರು ಅವರ ಶೋಧಕ್ಕೆ ಇಳಿದಿದ್ದರು. ಸುಳಿವು ಕೊಟ್ಟವರಿಗೆ 20,000 ರೂ. ಬಹುಮಾನ ಘೋಷಿಸಲಾಗಿತ್ತು.
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಿರಪ್ ಸೇವಿಸಿ 25ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದರು. ಕೋಲ್ಡ್ರಿಫ್ ಸಿರಪ್ ಸೇವಿಸಿದ ನಂತರ ಮಕ್ಕಳು ಮೂತ್ರಪಿಂಡದ ಸೋಂಕಿಗೆ ಒಳಗಾಗಿದ್ದು ಗಂಭೀರ ಸ್ಥಿತಿಗೆ ಒಳಗಾಗಿ ಸಾವು ಕಂಡಿದ್ದರು.
ಎರಡು ವರ್ಷದೊಳಗಿನ ಮಕ್ಕಳಲ್ಲಿ ಕಂಡುಬರುವ ಶೀತ ಮತ್ತು ಕೆಮ್ಮಿನ ಲಕ್ಷಣಗಳಿಗೆ ಚಿಕಿತ್ಸೆಗಾಗಿ ಕೋಲ್ಡ್ರಿಫ್ ಸಿರಪ್ ಸೂಚಿಸಲಾಗಿತ್ತು. ಇದೇ ತಿಂಗಳ ಆರಂಭದಲ್ಲಿ ತಮಿಳುನಾಡು ಅಧಿಕಾರಿಗಳು ಸಿರಪ್ ಮಾದರಿಗಳಲ್ಲಿ ಹಾನಿಕಾರಕ ವಸ್ತುವಾದ ಡೈಥಿಲೀನ್ ಗ್ಲೈಕೋಲ್ ಇರುವುದು ಕಂಡುಬಂದ ನಂತರ ಸಿರಪ್ ಬಳಕೆ ಮಾಡದಂತೆ ಸೂಚಿಸಿದ್ದರು. ಆದರೆ ಈ ಔಷಧಿಯನ್ನು ಅದಾಗಲೇ ಉತ್ತರ ಭಾರತಕ್ಕೆ ಪೂರೈಕೆ ಮಾಡಲಾಗಿತ್ತು. ಸಿರಪ್ ತಯಾರಕ ಸಂಸ್ಥೆ ತಮಿಳುನಾಡಿನದ್ದಾಗಿದ್ದು ವಿಷಕಾರಿ ಅಂಶ ಪತ್ತೆಯಾದರೂ ನಿರ್ಲಕ್ಷ್ಯ ವಹಿಸಿದ್ದು ದುಬಾರಿಯಾಗಿ ಪರಿಣಮಿಸಿದೆ.
The owner of Srisan Pharmaceuticals, the Tamil Nadu-based company that manufactured ColdRiff cough syrup, has been arrested in connection with the deaths of at least 20 children in Madhya Pradesh.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm