ಬ್ರೇಕಿಂಗ್ ನ್ಯೂಸ್
17-10-25 05:25 pm HK News Desk ದೇಶ - ವಿದೇಶ
ಅಹ್ಮದಾಬಾದ್, ಅ.17 : ಗುಜರಾತ್ ಬಿಜೆಪಿ ಸರ್ಕಾರದಲ್ಲಿ ಎಲ್ಲ 16 ಸಚಿವರ ರಾಜಿನಾಮೆ ಪಡೆದು ಸಂಪುಟ ಪುನಾರಚನೆ ಮಾಡಲಾಗಿದೆ. ಗೃಹ ಸಚಿವರಾಗಿದ್ದ ಹರ್ಷ ಸಾಂಘ್ವಿ ಅವರನ್ನು ನೂತನ ಉಪ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸಂಪುಟ ಸಚಿವರ ಸಂಖ್ಯೆಯನ್ನು 25ಕ್ಕೆ ವಿಸ್ತರಿಸಲಾಗಿದೆ.
ಹೊಸ ಸಂಪುಟದಲ್ಲಿ ಆರು ಮಾಜಿ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ಬಿಜೆಪಿ ಶಾಸಕಿ ರಿವಾಬಾ ಜಡೇಜಾ ಸೇರಿದಂತೆ 19 ಹೊಸಬರಿಗೆ ಸಚಿವ ಸ್ಥಾನ ಸಿಕ್ಕಿದೆ. ಹರ್ಷ ಸಾಂಘ್ವಿ, ಕುನ್ವರ್ಜಿ ಬವಲಿಯಾ, ಪ್ರಫುಲ್ ಪನ್ಸೇರಿಯಾ, ರಿಷಿಕೇಶ್ ಪಟೇಲ್, ಪರಶೋತ್ತಮ್ ಸೋಲಂಕಿ, ಕನುಭಾಯಿ ದೇಸಾಯಿ ತಮ್ಮ ಸಚಿವ ಸ್ಥಾನ ಉಳಿಸಿಕೊಂಡಿದ್ದಾರೆ.
ಹೊಸ ಸಂಪುಟದಲ್ಲಿ ಜಾತಿ ಲೆಕ್ಕಾಚಾರದಲ್ಲಿ ಒಬಿಸಿ ಸಮುದಾಯದ ಎಂಟು ಸಚಿವರು, ಪಾಟಿದಾರ್ ಸಮುದಾಯದ ಆರು ಮಂದಿ, ಬುಡಕಟ್ಟು ಸಮುದಾಯಗಳಿಂದ ನಾಲ್ಕು ಮಂದಿ, ಪರಿಶಿಷ್ಟ ಜಾತಿಗಳಿಂದ ಮೂವರು, ಕ್ಷತ್ರಿಯ ಸಮುದಾಯದ ಇಬ್ಬರು, ಬ್ರಾಹ್ಮಣ ಮತ್ತು ಜೈನ (ಲಘುಮತಿ) ಸಮುದಾಯಗಳಿಂದ ತಲಾ ಒಬ್ಬರು ಸಚಿವರಾಗಿ ಸ್ಥಾನ ಪಡೆದಿದ್ದಾರೆ.
ಭೂಪೇಂದ್ರ ಪಟೇಲ್ ಸಂಪುಟದ ಎಲ್ಲ 16 ಸಚಿವರು ನಿನ್ನೆ ರಾಜೀನಾಮೆ ನೀಡಿದ್ದರು. ಗುಜರಾತ್ ವಿಧಾನಸಭೆ 182 ಸದಸ್ಯರ ಬಲವನ್ನು ಹೊಂದಿದ್ದು, ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ಗರಿಷ್ಠ 27 ಸಚಿವರಿಗೆ ಅವಕಾಶ ನೀಡುತ್ತದೆ. ಭೂಪೇಂದ್ರ ಪಟೇಲ್ ನೇತೃತ್ವದ ಸರ್ಕಾರವು 2022ರಲ್ಲಿ ಅಸ್ತಿತ್ವಕ್ಕೆ ಬಂದಿತ್ತು. ಇದೀಗ ಎರಡೂವರೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರ ಅನುಸರಿಸಿ ಹೊಸಬರಿಗೆ ಅವಕಾಶ ನೀಡಲಾಗಿದೆ.
In a major political overhaul, the Gujarat BJP government has restructured its Cabinet, with Chief Minister Bhupendra Patel expanding his team to 25 ministers after the resignation of all 16 previous members.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm