ಬ್ರೇಕಿಂಗ್ ನ್ಯೂಸ್
21-10-25 03:11 pm HK News Desk ದೇಶ - ವಿದೇಶ
ಇಸ್ಲಾಮಾಬಾದ್, ಅ.21 : ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಧರ್ಮವನ್ನು ಪ್ರಚಾರ ಮಾಡಿದ್ದಕ್ಕಾಗಿ ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಮೊಹಮ್ಮದ್ ರಿಜ್ವಾನ್ ಅವರನ್ನು ನಾಯಕ ಪಟ್ಟದಿಂದ ಕೆಳಗಿಳಿಸಲಾಗಿದೆ ಎಂದು ಪಾಕಿಸ್ತಾನ ತಂಡದ ಮಾಜಿ ಆಟಗಾರ ರಶೀದ್ ಲತೀಫ್ ಹೇಳಿಕೆ ನೀಡಿದ್ದು ಜಾಲತಾಣದಲ್ಲಿ ವೈರಲ್ ಆಗಿದ್ದಲ್ಲದೆ ಚರ್ಚೆಗೆ ಕಾರಣವಾಗಿದೆ.
ರಿಜ್ವಾನ್ ಅವರ ಜಾಗಕ್ಕೆ ಶಾಹೀನ್ ಶಾ ಅಫ್ರಿದಿಯನ್ನು ನೇಮಿಸಲಾಗಿದ್ದು ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೊಹಮ್ಮದ್ ರಿಜ್ವಾನ್ ಪ್ಯಾಲೆಸ್ತೀನ್ ಪರವಾಗಿ ಬಹಿರಂಗವಾಗಿ ಮಾತನಾಡಿದ್ದರು. ಈ ಕಾರಣಕ್ಕೆ ಅವರನ್ನು ನಾಯಕ ಸ್ಥಾನದಿಂದ ತೆಗೆಯಲಾಗಿದೆ ಎಂದು ಆರೋಪಿಸಿದರು.
ಕೋಚ್ ಮೈಕ್ ಹೆಸ್ಸನ್ ಅವರು ರಿಜ್ವಾನ್ ಅವರ ಡ್ರೆಸ್ಸಿಂಗ್ ರೂಮ್ ಸಂಸ್ಕೃತಿಯನ್ನು ಇಷ್ಟಪಡುತ್ತಿಲ್ಲ. ಇಸ್ಲಾಮಿಕ್ ದೇಶದಲ್ಲಿ ಇಸ್ಲಾಮಿಕ್ ಅಲ್ಲದ ನಾಯಕ ಬರಬೇಕು ಎಂಬ ಮನಸ್ಥಿತಿಯನ್ನು ಪಿಸಿಬಿ ಹೊಂದಿದೆ. ಪ್ಯಾಲೆಸ್ತೀನ್ ಧ್ವಜವನ್ನು ಬಹಿರಂಗವಾಗಿ ಪ್ರದರ್ಶನ ಮಾಡಿದ್ದಕ್ಕೆ ಅವರನ್ನು ತೆಗೆಯುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ರಿಜ್ವಾನ್ ಅವರನ್ನು ಏಕದಿನ ತಂಡದ ನಾಯಕ ಸ್ಥಾನದಿಂದ ಇಳಿಸಿ ಶಾಹೀನ್ ಶಾ ಅಫ್ರಿದಿ ಅವರನ್ನು ಆಯ್ಕೆ ಮಾಡಲಾಗಿದೆ.
ಮೊಹಮ್ಮದ್ ರಿಜ್ವಾನ್ ಇಸ್ಲಾಂ ಮೌಲ್ಯಗಳ ಮೇಲೆ ಹೆಚ್ಚು ಗಮನ ಹರಿಸುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟಿಗ ಇಮಾಮ್ ಉಲ್ ಹಕ್ ಈ ಹಿಂದೆ ಹೇಳಿದ್ದರು. ಯಾವುದೇ ಹೋಟೆಲ್ಗೆ ಹೋದಾಗ ರಿಜ್ವಾನ್ ಮೊದಲು ನಮಾಜ್ ಕೊಠಡಿಯನ್ನು ಹುಡುಕುತ್ತಾರೆ. ನಮಾಜ್ ಮಾಡಲು ಕೋಣೆಯಲ್ಲಿ ಬಿಳಿ ಬಟ್ಟೆಯನ್ನು ಹಾಸುತ್ತಾರೆ. ಮುಸ್ಲಿಮೇತರರು ಕೋಣೆ ಪ್ರವೇಶಕ್ಕೆ ನಿರ್ಬಂಧ ಹೇರುತ್ತಾರೆ. ನಮಾಜ್ ಸಮಯಕ್ಕಾಗಿ ವಾಟ್ಸಪ್ ಗ್ರೂಪ್ ರಚನೆ ಮಾಡುತ್ತಾರೆ ಎಂದು ತಿಳಿಸಿದ್ದರು.
The Pakistan Cricket Board (PCB) has appointed Shaheen Shah Afridi as the new ODI captain, replacing Mohammad Rizwan. Former cricketer Rashid Latif alleged that Rizwan was removed for promoting Islam and expressing support for Palestine, a claim that has gone viral online. However, the PCB has officially denied these allegations, stating that the leadership change was based on performance and team strategy, not religious or political reasons.
21-10-25 03:40 pm
HK News Desk
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 03:07 pm
Mangalore Correspondent
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
21-10-25 05:12 pm
Mangalore Correspondent
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm