ಬ್ರೇಕಿಂಗ್ ನ್ಯೂಸ್
22-10-25 10:56 pm HK News Desk ದೇಶ - ವಿದೇಶ
ತಿರುವನಂತಪುರಂ, ಅ.22 : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾರತದ ಅತಿ ಪ್ರಸಿದ್ಧ ಅಯ್ಯಪ್ಪ ದೇಗುಲ ಎನಿಸಿರುವ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ಸನ್ನಿಧಾನಕ್ಕೆ ಇರುಮುಡಿ ಹೊತ್ತುಕೊಂಡು ತೆರಳಿ ಪೂಜೆ ಅರ್ಪಿಸಿದ್ದಾರೆ. ಆಮೂಲಕ ಅಯ್ಯಪ್ಪ ಸನ್ನಿಧಾನಕ್ಕೆ ಆಗಮಿಸಿದ ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಶಬರಿಮಲೆ ಸನ್ನಿಧಾನಕ್ಕೆ ಸಾಂಪ್ರದಾಯಿಕವಾಗಿ ಬಂದಿದ್ದ 10 ವರ್ಷದಿಂದ 50 ವರ್ಷದೊಳಗಿನ ಯುವತಿಯರು ಬರಬಾರದು ಎಂಬ ಕಟ್ಟುಕಟ್ಟಳೆಯ ವಿರುದ್ಧ 2018ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಎಲ್ಲ ವಯೋಮಾನದ ಮಹಿಳೆಯರಿಗೂ ಪ್ರವೇಶ ನೀಡಬೇಕೆಂದು ತೀರ್ಪು ನೀಡಿದ್ದರೂ, ಅದಕ್ಕೆದುರಾಗಿ ಶಬರಿಮಲೆಯಲ್ಲಿ ಭಾರೀ ಪ್ರತಿಭಟನೆಯೂ ನಡೆದಿತ್ತು. ಆಬಳಿಕ ತೀರ್ಪು ಪಾಲನೆ ಆಗದಿದ್ದರೂ ಇದೀಗ ರಾಷ್ಟ್ರಪತಿಯಾಗಿ 67 ವರ್ಷದ ಮುರ್ಮು ಸನ್ನಿಧಾನಕ್ಕೆ ಇರುಮುಡಿ ಹೊತ್ತುಕೊಂಡೇ ತೆರಳಿ ಇತಿಹಾಸ ನಿರ್ಮಿಸಿದ್ದಾರೆ. 1972ರಲ್ಲಿ ವಿವಿ ಗಿರಿ ಶಬರಿಮಲೆಗೆ ಆಗಮಿಸಿದ್ದು ಆ ಸಂದರ್ಭದಲ್ಲಿ ಸನ್ನಿಧಾನ ವರೆಗೆ ರಸ್ತೆ ಇಲ್ಲದ ಕಾರಣ ಡೋಲಿಯಲ್ಲಿ ಹೊತ್ತುಕೊಂಡು ಹೋಗಿ ದೇವರ ದರ್ಶನ ಮಾಡಿಸಲಾಗಿತ್ತು.


ದ್ರೌಪದಿ ಮುರ್ಮು ಅವರು ಬೆಳಗ್ಗೆ 11 ಗಂಟೆಗೆ ಪಂಪಾ ತೀರಕ್ಕೆ ಆಗಮಿಸಿದ್ದು, ಅಲ್ಲಿ ನದಿಯಲ್ಲಿ ಸ್ನಾನ ಮಾಡಿ ಕಪ್ಪು ಸೀರೆಯನ್ನು ಉಟ್ಟಿದ್ದಾರೆ. ಅಲ್ಲಿಯೇ ಇರುವ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆಗೈದು ಸಂಪ್ರದಾಯದಂತೆ ಅಲ್ಲಿನ ಮೇಲ್ ಶಾಂತಿ ಮೂಲಕ ಇರುಮುಡಿ ಪಡೆದಿದ್ದಾರೆ. ಅವರ ಜೊತೆಗಿದ್ದ ಅಳಿಯ ಗಣೇಶ್ ಚಂದ್ರ ಹೊಂಬ್ರಮ್ ಮತ್ತು ರಾಷ್ಟ್ರಪತಿಯವರ ಭದ್ರತಾ ಸಿಬಂದಿ, ಅಧಿಕಾರಿಗಳು ಕೂಡ ಇರುಮುಡಿ ಪಡೆದು ತಲೆಯಲ್ಲಿ ಹೊತ್ತುಕೊಂಡಿದ್ದಾರೆ. ಪಂಪೆಯಿಂದ ಸನ್ನಿಧಾನಕ್ಕೆ 4.5 ಕಿಮೀ ಉದ್ದಕ್ಕೆ ರಸ್ತೆ ಮೂಲಕ ತೆರಳಿದ್ದು, ದೇವಸ್ಥಾನ ಸಮೀಪಿಸುತ್ತಿದ್ದಂತೆ ಮುಖ್ಯ ಅರ್ಚಕರು ಪೂರ್ಣ ಕುಂಭದ ಸ್ವಾಗತ ನೀಡಿದ್ದಾರೆ. ರಾಜ್ಯ ಸರಕಾರದ ದೇವಸ್ವಂ ಸಚಿವ ವಿ.ಎನ್ ವಾಸವನ್ ಮತ್ತು ಮುಖ್ಯ ಅರ್ಚಕ ಕೊಂಡರಾರು ಮಹೇಶ್ ಮೋಹನಾರು ಸ್ವಾಗತಿಸಿದ್ದಾರೆ.
ವಿಶೇಷ ಭದ್ರತಾ ಸಿಬಂದಿಯೇ ರಾಷ್ಟ್ರಪತಿಯನ್ನು ಕೈಯಲ್ಲಿ ಹಿಡಿದುಕೊಂಡು ಅಯ್ಯಪ್ಪ ಸನ್ನಿಧಾನದ 18 ಮೆಟ್ಟಿಲುಗಳನ್ನು ಹತ್ತಿಸಿದ್ದಾರೆ. ಇರುಮುಡಿ ಹೊತ್ತವರಿಗೆ ಮಾತ್ರ 18 ಮೆಟ್ಟಿಲು ಹತ್ತುವ ಅವಕಾಶ ಇರುವುದರಿಂದ ಭದ್ರತಾ ಸಿಬಂದಿಯೂ ದ್ರೌಪದಿ ಮುರ್ಮು ಜೊತೆಗೆ ಇರುಮುಡಿ ಹೊತ್ತುಕೊಂಡೇ ದೇವರ ದರ್ಶನ ಪಡೆದಿದ್ದು ವಿಶೇಷ. ಇರುಮುಡಿಯನ್ನು ಪಡೆದುಕೊಂಡ ಅರ್ಚಕರು ಮಧ್ಯಾಹ್ನದ ಪೂಜೆಯನ್ನು ನೆರವೇರಿಸಿದ್ದು, ರಾಷ್ಟ್ರಪತಿ ವೀಕ್ಷಣೆ ಮಾಡಿದ್ದಾರೆ.
ರಾಷ್ಟ್ರಪತಿ ಭೇಟಿ ಸಂದರ್ಭದಲ್ಲಿ ಇತರ ಯಾತ್ರಿಕರಿಗೆ ಪ್ರವೇಶ ನಿಲ್ಲಿಸಲಾಗಿತ್ತು. ಅಯ್ಯಪ್ಪ ಸನ್ನಿಧಾನದ ಬಳಿಕ ಅಲ್ಲಿಯೇ ಇರುವ ಮಲ್ಲಿಕಾಪುರಂ ದೇವಸ್ಥಾನಕ್ಕೂ ತೆರಳಿ ದ್ರೌಪದಿ ಮುರ್ಮು ಪೂಜೆ ಸಲ್ಲಿಸಿದ್ದಾರೆ. ನಾಲ್ಕು ದಿನಗಳ ಕೇರಳ ಭೇಟಿಯಲ್ಲಿ ಶಬರಿಮಲೆ ಅಯ್ಯಪ್ಪ ದರ್ಶನ ಪ್ರಮುಖವಾಗಿತ್ತು.
In a historic moment, President Droupadi Murmu became the first woman President of India to visit the Sabarimala Ayyappa Temple in Kerala’s Pathanamthitta district.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm