ಬ್ರೇಕಿಂಗ್ ನ್ಯೂಸ್
28-12-20 04:51 pm Headline Karnataka News Network ದೇಶ - ವಿದೇಶ
ವುಹಾನ್, ಡಿ.28: ಕೊರೊನಾ ವೈರಸ್ ಸೋಂಕಿನ ಬಗ್ಗೆ ಮೊದಲ ಬಾರಿಗೆ ವರದಿ ಮಾಡಿದ್ದ ಸಿಟಿಜನ್ ಜರ್ನಲಿಸ್ಟ್ ಅನ್ನು ಚೀನಾದ ಕೋರ್ಟ್ ನಾಲ್ಕು ವರ್ಷದ ಜೈಲು ಶಿಕ್ಷೆ ವಿಧಿಸಿದೆ.
37 ವರ್ಷದ ಝಂಗ್ ಝಾನ್, ಕೋರ್ಟಿನಿಂದ ಶಿಕ್ಷೆಗೊಳಗಾದ ಮಹಿಳೆ. ಈಕೆ, ಚೀನಾದ ಶಾಂಘೈ ನಿವಾಸಿಯಾಗಿದ್ದು, ಕಳೆದ ಫೆಬ್ರವರಿ 1ರಂದು ವುಹಾನ್ ನಗರಕ್ಕೆ ಬಂದಿದ್ದಳು. ಅಲ್ಲಿನ ಸ್ಥಿತಿಯನ್ನು ನೋಡಿ ಅವಕ್ಕಾದ ಝಾನ್, ಸೋಂಕಿಗೊಳಗಾದ ಜನರು ಆಸ್ಪತ್ರೆಯಲ್ಲಿ ಕ್ಯೂ ನಿಂತಿರುವುದು, ಅಲ್ಲಿನ ಆಸ್ಪತ್ರೆಯ ಸ್ಥಿತಿಗತಿ ಮತ್ತು ನಗರದ ಬೀದಿಗಳು ಖಾಲಿ ಖಾಲಿಯಾಗಿರುವುದನ್ನು ವಿಡಿಯೋ ಮಾಡಿ ಯೂಟ್ಯೂಬ್ ನಲ್ಲಿ ಅಪ್ಲೋಡ್ ಮಾಡಿದ್ದಳು. ಅಲ್ಲೀ ವರೆಗೂ ಸೋಂಕಿನ ಬಗ್ಗೆ ಅಲ್ಲಿನ ಮಾಧ್ಯಮಗಳಾಗಲೀ, ಸರಕಾರವಾಗಲೀ ಹೊರ ಜಗತ್ತಿಗೆ ತಿಳಿಸಿರಲಿಲ್ಲ. ತಾನೇ ಸ್ವಂತ ಕಾಳಜಿಯಿಂದ ಮಾಡಿದ್ದ ವರದಿ ಈಗ ಆಕೆಯನ್ನು ಜೈಲಿಗೆ ಅಟ್ಟುವಂತೆ ಮಾಡಿದೆ.

ಇದಾಗುತ್ತಿದ್ದಂತೆ, ಝನ್ ಝಾಂಗ್ ನನ್ನು ಪೊಲೀಸರು ಬಂಧಿಸಿದ್ದರು. ಎಂಟು ತಿಂಗಳ ಬಂಧಿಸಿಟ್ಟು ಕೋರ್ಟಿನಲ್ಲಿ ವಾದ- ವಿವಾದ ನಡೆದು ಈಗ ತೀರ್ಪು ಹೊರಬಿದ್ದಿದೆ. ಅಭಿಪ್ರಾಯ ಸ್ವಾತಂತ್ರ್ಯದ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಕೋರ್ಟಿನಲ್ಲಿ ಝಾಂಗ್ ಹೇಳಿಕೆ ನೀಡಿದ್ದಾಳೆ. ಆದರೆ, ಕೋರ್ಟ್ ಈ ವರದಿಯ ಬಗ್ಗೆ ಬೇರೆಯೇ ಅಭಿಪ್ರಾಯ ಪಟ್ಟಿದೆ. ಇಂಥ ವರದಿಯಿಂದ ಜನರ ನಡುವೆ ಸಂಘರ್ಷ, ಘರ್ಷಣೆಗೆ ಕಾರಣವಾಗಿದ್ದೀಯ ಎಂದು ಹೇಳಿದೆ. ಇದಕ್ಕಾಗಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಪ್ರಕಟಿಸಿದೆ.

ವುಹಾನ್ ನಗರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದ ವೈರಸ್, ಆಬಳಿಕ ಇಡೀ ಜಗತ್ತಿಗೆ ಹಬ್ಬಿದೆ. ಜಗತ್ತಿನಲ್ಲಿ 80 ಮಿಲಿಯ ಜನರಿಗೆ ಸೋಂಕು ಹರಡಿದರೆ, ಇದರಿಂದಾಗಿ 1.76 ಮಿಲಿಯ ಜನರು ಸಾವು ಕಂಡಿದ್ದಾರೆ. ಶಾಂಘೈ ನಗರದಲ್ಲಿ ಕೋರ್ಟ್ ವಿಚಾರಣೆ ನಡೆಯುತ್ತಿದ್ದಾಗ ಹೊರಭಾಗದಲ್ಲಿ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದರು. ಸೋಂಕನ್ನು ಯಶಸ್ವಿಯಾಗಿ ನಿಭಾಯಿಸಿದ್ದಕ್ಕೆ ಚೀನಾದ ಮಾಧ್ಯಮಗಳು ಅಲ್ಲಿನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರನ್ನು ಹೊಗಳಿದೆ.
A Chinese citizen journalist who covered Wuhan's virus outbreak is facing up to five years in jail, according to newly released documents.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm