ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm