ಬ್ರೇಕಿಂಗ್ ನ್ಯೂಸ್
02-11-25 05:13 pm HK News Desk ದೇಶ - ವಿದೇಶ
ತಿರುವನಂತಪುರಂ, ನ.2 : ಕೇರಳದಲ್ಲಿ ಎಡರಂಗ ಸರ್ಕಾರ ಅಸೆಂಬ್ಲಿ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿದ್ದು, ವ್ಯಾಪಕ ವಿರೋಧ ವ್ಯಕ್ತವಾಗತೊಡಗಿದೆ.
ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗವು ಕೇರಳದ ಎಡರಂಗ ಸರ್ಕಾರ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿಸಿ ಮೀಸಲಾತಿ ನೀಡಿರುವ ಕ್ರಮವನ್ನು ಪ್ರಶ್ನಿಸಿದ್ದು, ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ ನೀಡಿದೆ ಎಂದು ಟೀಕಿಸಿದೆ.
ಆಯೋಗದ ಅಧ್ಯಕ್ಷ ಹನ್ಸ್ ರಾಜ್ ಅಹಿರ್, ಕೇರಳ ರಾಜ್ಯ ಇತರ ಹಿಂದುಳಿದ ವರ್ಗಗಳ (OBC) ಮೀಸಲಾತಿ ಪ್ರಯೋಜನಗಳನ್ನು ಧಾರ್ಮಿಕವಾಗಿ ಎರಡು ಗುಂಪುಗಳಿಗೆ ವಿಸ್ತರಿಸಲು ಯಾವ ಸಮೀಕ್ಷೆಯ ಮಾನದಂಡ ಇದೆ ಎಂಬುದನ್ನು ಸ್ಪಷ್ಟಪಡಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ. ಓಬಿಸಿ ಮೀಸಲಾತಿಯನ್ನು ಯಾವುದೇ ಧರ್ಮದ ಹೆಸರಿನಲ್ಲಿ ನೀಡುವುದು ಸರಿಯಲ್ಲ. ಒಂದೇ ಧರ್ಮದೊಳಗಿನ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿದ ನಂತರವೇ ಅದನ್ನು ನೀಡಬೇಕು ಎಂದು ಅವರು ಹೇಳಿದರು.
ಎಡರಂಗ ಸರ್ಕಾರದ ಈ ನಡೆಯನ್ನು "ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಮೀಸಲಾತಿ" ಎಂದು ಅಹಿರ್ ಹೇಳಿದ್ದಾರೆ. ಆಯೋಗವು ಕೇರಳ ಸರ್ಕಾರದಿಂದ ವಿವರವಾದ ವರದಿಯನ್ನು ಕೇಳಿದೆ ಮತ್ತು ಅದನ್ನು 15 ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ ಎಂದವರು ಹೇಳಿದರು.
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಓಬಿಸಿ ಕೋಟಾವನ್ನು ಸರಿಯಾಗಿ ಜಾರಿಗೆ ತರಬೇಕೆಂದು ಆಯೋಗವು ಶಿಫಾರಸು ಮಾಡಿದೆ ಎಂದವರು ಹೇಳಿದರು. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಗುಂಪುಗಳನ್ನು ರಾಜ್ಯದ ಓಬಿಸಿ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಕೇರಳದಲ್ಲಿಯೂ ವಿರೋಧ ವ್ಯಕ್ತವಾಗಿದೆ.
The Left government in Kerala has sparked widespread opposition after deciding to extend OBC reservation benefits to Muslim and Christian communities, just months before the upcoming Assembly elections.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 04:36 pm
HK News Staffer
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm