ಬ್ರೇಕಿಂಗ್ ನ್ಯೂಸ್
06-11-25 10:22 pm HK News Desk ದೇಶ - ವಿದೇಶ
ನವದೆಹಲಿ, ನ.6 : ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಅಥವಾ ನಾಯಕತ್ವ ಬದಲಾವಣೆಯ ವದಂತಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ತಳ್ಳಿಹಾಕಿದ್ದು, 2028 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿ ಎಂದು ಗುರುವಾರ ಸ್ಪಷ್ಟಪಡಿಸಿದ್ದಾರೆ.
ತಮ್ಮನ್ನು ತಾವು ಪಕ್ಷದ "ಶಿಸ್ತಿನ ಸಿಪಾಯಿ" ಎಂದು ಹೇಳಿಕೊಂಡಿರುವ ಡಿಕೆ ಶಿವಕುಮಾರ್, ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಹೇಳುವ ಮೂಲಕ ಯಾವುದೇ ಕ್ರಾಂತಿಯನ್ನು ನಿರಾಕರಿಸಿದ್ದಾರೆ.
ನಾನು ಇಲ್ಲಿ ಯಾರನ್ನೂ ಭೇಟಿಯಾಗುತ್ತಿಲ್ಲ. ಸಚಿವ ಸಂಪುಟ ಪುನರ್ರಚನೆ ಬಗ್ಗೆ ನನ್ನೊಂದಿಗೆ ಯಾವುದೇ ಚರ್ಚೆ ನಡೆದಿಲ್ಲ. ಅದು ಸಿಎಂ ಅವರ ವಿಶೇಷ ಹಕ್ಕು. ಅವರು ಅದನ್ನು ಮಾಡಲಿ ಎಂದು ಡಿಕೆಶಿ ದೆಹಲಿಯಲ್ಲಿ ಹೇಳಿದ್ದಾರೆ. ನನಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಯೋಜನೆ ಇಲ್ಲ. ಪಕ್ಷ ಸಂಘಟನೆ ವಿಚಾರವಾಗಿ ಚರ್ಚೆ ಮಾಡಲಾಗುವುದು. ಮತ ಗಳ್ಳತನ ವಿಚಾರವಾಗಿ ನಿನ್ನೆ ರಾತ್ರಿಯೂ ಸಭೆ ಮಾಡಿದ್ದೇವೆ. ನಾಯಕತ್ವ ಬದಲಾವಣೆ ಬಗ್ಗೆ ನಾನು ಏನಾದರೂ ಹೇಳಿದ್ದೇನಾ? ಸಿಎಂ ಏನಾದರೂ ಹೇಳಿದ್ದಾರಾ? ಪಕ್ಷ ಏನು ಹೇಳುತ್ತದೆಯೋ ಅದನ್ನು ಕೇಳಿಕೊಂಡು ಹೋಗುತ್ತೇವೆ ಎಂದಿದ್ದಾರೆ.
ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷಗಳ ಕಾಲ ಇರಬೇಕೆಂದು ಹೇಳಿದರೆ, ಅವರು ಐದು ವರ್ಷ ಇರುತ್ತಾರೆ. ಹತ್ತು ವರ್ಷ ಇರಬೇಕೆಂದರೆ, ಅವರು ಹತ್ತು ವರ್ಷಗಳ ಕಾಲ ಇರುತ್ತಾರೆ. 15 ವರ್ಷ ಇರಬೇಕಿದ್ದರೆ, 15 ವರ್ಷಗಳ ಕಾಲ ಇರುತ್ತಾರೆ. ನಮಗೆ ಪಕ್ಷದಿಂದ ನೀಡಿದ ಕರ್ತವ್ಯವನ್ನು ನಾವು ನಿರ್ವಹಿಸುತ್ತೇವೆ ಎಂದು ಹೇಳಿದರು. ನವೆಂಬರ್ ಕ್ರಾಂತಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, "ನವೆಂಬರ್ ಅಥವಾ ಡಿಸೆಂಬರ್, ಜನವರಿ, ಫೆಬ್ರವರಿಯಲ್ಲಿ ಯಾವುದೇ ಕ್ರಾಂತಿ ಆಗುವುದಿಲ್ಲ. ಕ್ರಾಂತಿ ಆಗುವುದು ಏನಿದ್ದರೂ 2028 ರಲ್ಲಿ. ಅದು ಕಾಂಗ್ರೆಸ್ ಅಧಿಕಾರಕ್ಕೆ ಮರಳಿದಾಗ ಮಾತ್ರ ಕ್ರಾಂತಿಯಾಗುತ್ತದೆ ಎಂದರು.
Deputy Chief Minister DK Shivakumar refuted speculation about a leadership change in Karnataka, asserting that both he and Chief Minister Siddaramaiah are committed to the party’s decision. He said any “revolution” would only happen when Congress wins again in 2028.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm