ಬ್ರೇಕಿಂಗ್ ನ್ಯೂಸ್
07-11-25 05:21 pm HK News Desk ದೇಶ - ವಿದೇಶ
ತಿರುವನಂತಪುರಂ, ನ.7 : ಎರಡನೇ ಮದುವೆಯನ್ನು ರಿಜಿಸ್ಟರ್ ಮಾಡಲು ನಿರಾಕರಿಸಿದ ಸ್ಥಳೀಯಾಡಳಿತದ ನಿರ್ಧಾರವನ್ನು ಎತ್ತಿಹಿಡಿದಿರುವ ಕೇರಳ ಹೈಕೋರ್ಟ್, ಮುಸ್ಲಿಂ ವ್ಯಕ್ತಿಯೊಬ್ಬರನ್ನು ಉದ್ದೇಶಿಸಿ ಧರ್ಮದ ಪ್ರಾಶಸ್ತ್ಯ ಎರಡನೇಯದ್ದು. ಈ ದೇಶದಲ್ಲಿ ಸಂವಿಧಾನಕ್ಕೇ ಮೊದಲ ಪ್ರಾಶಸ್ತ್ಯ ಎಂದು ಹೇಳಿದೆ.
ಕಣ್ಣೂರಿನ 44 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮೊದಲ ಮದುವೆಯನ್ನು ರಿಜಿಸ್ಟರ್ ಮಾಡಿದ್ದು 2017ರಲ್ಲಿ ಎರಡನೇ ಮದುವೆಯಾಗಿದ್ದ. ಎರಡನೇ ಪತ್ನಿಗೆ ಮತ್ತೆರಡು ಮಕ್ಕಳಾಗಿತ್ತು. ಗಂಡನ ಆಸ್ತಿಯಲ್ಲಿ ಪತ್ನಿ ಮತ್ತು ಮಕ್ಕಳಿಗೆ ಸಮಾನ ಹಕ್ಕು ಪಡೆಯುವುದಕ್ಕಾಗಿ ಕಾನೂನು ಪ್ರಕಾರ, ಮದುವೆ ರಿಜಿಸ್ಟರ್ ಆಗಿರಬೇಕಾಗುತ್ತದೆ. ಇದರಂತೆ, ಸ್ಥಳೀಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಎರಡನೇ ಮದುವೆಯನ್ನು ನೋಂದಣಿ ಮಾಡಲು ಅರ್ಜಿ ಸಲ್ಲಿಸಿದ್ದರು. ಆದರೆ ನೋಂದಣಾಧಿಕಾರಿ ಎರಡನೇ ಮದುವೆಯ ನೋಂದಣಿಗೆ ಕಾನೂನು ಪ್ರಕಾರ ನಿರಾಕರಿಸಿದ್ದರು.
ನಿರಾಕರಣೆಯನ್ನು ಪ್ರಶ್ನಿಸಿ ದಂಪತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಾಧೀಶ ಪಿ.ವಿ.ಕುಂಞಕೃಷ್ಣನ್ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಎರಡನೇ ಮದುವೆಗೆ ಅವಕಾಶ ಇರಬಹುದು. ಆದರೆ ಎರಡನೇ ಮದುವೆಯನ್ನು ನೋಂದಣಿ ಮಾಡಬೇಕೆಂದಿದ್ದರೆ ಅದಕ್ಕೆ ಈ ನೆಲದ ಕಾನೂನು ಒಪ್ಪಬೇಕು. ಆಗ ಮೊದಲ ಪತ್ನಿಯ ಅವಶ್ಯಕತೆ ಪ್ರಶ್ನೆ ಬರುತ್ತದೆ.
ಇಂತಹ ಸಂದರ್ಭದಲ್ಲಿ ಧರ್ಮದ ಪ್ರಾಶಸ್ತ್ಯ ಸೆಕಂಡರಿಯಾಗುತ್ತದೆ, ಸಂವಿಧಾನ ಕೊಟ್ಟಿರುವ ಕಾನೂನೇ ಧರ್ಮಕ್ಕಿಂತ ಮಿಗಿಲಾಗುತ್ತದೆ. ಇದೊಂದು ರೀತಿಯಲ್ಲಿ ನೈಸರ್ಗಿಕ ನ್ಯಾಯದ ಮೂಲಭೂತ ತತ್ವವಾಗಿರುತ್ತದೆ. ನ್ಯಾಯಾಲಯ ಯಾವುದೇ ವ್ಯಕ್ತಿಯ ಭಾವನೆಯನ್ನು ತಳ್ಳಿಹಾಕಲಾಗದು. ಇಲ್ಲಿ ಎರಡನೇ ಮದುವೆಯನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಮೊದಲ ಪತ್ನಿಯ ಭಾವನೆಯು ಮುಖ್ಯವಾಗುತ್ತದೆ.
ಧರ್ಮ ಗ್ರಂಥ ಕುರಾನ್ ಅಥವಾ ವೈಯಕ್ತಿಕ ಕಾನೂನು ಮಂಡಳಿ ಮೊದಲ ಪತ್ನಿ ಇರುವಾಗ ಇನ್ನೊಬ್ಬಳ ಜೊತೆಗೆ ಸಂಬಂಧ ಹೊಂದುವುದನ್ನು, ಎರಡನೇ ಪತ್ನಿಯನ್ನು ಇರಿಸಿಕೊಳ್ಳುವುದನ್ನು ಒಪ್ಪುತ್ತದೆಯೇ ಎಂದು ನಂಗನಿಸುತ್ತಿಲ್ಲ. ಎಲ್ಲರಿಗೂ ನ್ಯಾಯ ದೊರಕಿಸುವುದು, ವೈವಾಹಿಕ ಸಂಬಂಧಗಳಲ್ಲಿ ಸಮಾನತೆ ಕಾಯ್ದುಕೊಳ್ಳುವುದನ್ನು ಕುರಾನ್ ಹೇಳುತ್ತದೆ ಎನ್ನುವುದು ನನ್ನ ಭಾವನೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಇದಲ್ಲದೆ, ಇಂತಹ ಪ್ರಕರಣಗಳಲ್ಲಿ ಮೊದಲ ಪತ್ನಿ ಕೇವಲ ಮೂಕಪ್ರೇಕ್ಷಕನಾಗಿ ಇರಬೇಕೆಂದು ಹೇಳುವುದಿಲ್ಲ. ಗಂಡ ಎರಡನೇ ಮದುವೆಯನ್ನು ನೋಂದಣಿ ಮಾಡುವ ಸಂದರ್ಭದಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶ ಇರುತ್ತದೆ. ನೋಂದಣಿಗೆ ಅರ್ಜಿ ಹಾಕುವಾಗಲೇ ನೋಂದಣಾಧಿಕಾರಿ, ಮೊದಲ ಪತ್ನಿ ಜೀವಂತ ಇದ್ದರೆ ಆಕೆಗೆ ನೋಟೀಸ್ ಮಾಡಿ ಅಹವಾಲು ಕೇಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
The Kerala High Court has upheld a local authority’s decision to refuse registration of a Muslim man’s second marriage, emphasizing that in India, the Constitution holds primacy over religion.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm