ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm