ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm