ಬ್ರೇಕಿಂಗ್ ನ್ಯೂಸ್
11-11-25 10:20 pm HK News Desk ದೇಶ - ವಿದೇಶ
ಕಾಸರಗೋಡು, ನ.11: ಸ್ಥಳೀಯ ನಾಗರಿಕರ ಪ್ರತಿಭಟನೆ, ಹೋರಾಟಗಳ ನಡುವೆಯೇ ಕಾಸರಗೋಡು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ ನ.12ರ (ಬುಧವಾರ) ಬೆಳಗ್ಗೆ 8 ಗಂಟೆಯಿಂದ ಶುಲ್ಕ ವಸೂಲಿ ಆರಂಭಗೊಳ್ಳಲಿದೆ.
ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈಗಾಗಲೇ ಘೋಷಣೆ ಮಾಡಿದ್ದು, ಜಾಹೀರಾತು ನೀಡುವ ಮೂಲಕ ಜನರಿಗೆ ಮಾಹಿತಿ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರಕಟಿಸಿದ ಅಧಿಸೂಚನೆಯಂತೆ ನ.12ರಂದು ಬೆಳಗ್ಗೆ 8ರಿಂದ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡಲಿದೆ.
ಇದರಂತೆ ಕಾರು, ಜೀಪು, ವ್ಯಾನ್ ಸಹಿತ ಲಘು ವಾಹನಗಳ ಏಕಮುಖಿ ಸಂಚಾರಕ್ಕೆ ನಾಳೆಯಿಂದ 85 ರೂ. ಶುಲ್ಕ ಪಾವತಿಸಬೇಕು. ಮಿನಿ ಬಸ್ ಸಹಿತ ಇತರ ವಾಹನಗಳಿಗೆ ಸಂಚಾರಕ್ಕೆ 140 ರೂ., ಬಸ್, ಟ್ರಕ್ ಸಹಿತ ಘನ ವಾಹನಕ್ಕೆ 290 ರೂ. ಮತ್ತು ವಾಣಿಜ್ಯ ವಾಹನಗಳಿಗೆ 320 ರೂ. ಶುಲ್ಕ ಸೇರಿದಂತೆ ವಿವಿಧ ಕೆಟಗರಿ ನೀಡಲಾಗಿದೆ. ಟೋಲ್ ಪ್ಲಾಜಾ ಸುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವವರ ವಾಣಿಜ್ಯೇತರ ವಾಹನಗಳಿಗೆ ಪ್ರತಿ ತಿಂಗಳು 340 ರೂ. ಶುಲ್ಕ ನಿಗದಿಗೊಳಿಸಿ ಶುಲ್ಕದಲ್ಲಿ ವಿನಾಯ್ತಿ ನೀಡಿದೆ.
ಟೋಲ್ ಪ್ಲಾಜಾ ವಿರೋಧಿಸಿ ನಾಗರಿಕ ಕ್ರಿಯಾ ಸಮಿತಿ ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದು ತಡೆಯಾಜ್ಞೆ ನೀಡಲು ಕೋರಿದೆ. ಇದರ ತೀರ್ಪು ಬುಧವಾರ ಹೊರಬೀಳುವ ಸಾಧ್ಯತೆ ಇದೆ. ಇದಕ್ಕೂ ಮೊದಲೇ ಹೆದ್ದಾರಿ ಇಲಾಖೆ ಶುಲ್ಕ ಸಂಗ್ರಹಕ್ಕೆ ಮುಂದಾಗಿದೆ.
Despite ongoing public protests and opposition, toll collection at the Kumble Arikkadi Toll Plaza on the Kasaragod–Mangaluru National Highway will begin from 8 a.m. on Wednesday, November 12.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm