ಬ್ರೇಕಿಂಗ್ ನ್ಯೂಸ್
13-11-25 05:13 pm HK Staffer ದೇಶ - ವಿದೇಶ
ಚೆನ್ನೈ, ನ.13: ತರಬೇತಿ ವಿವಾನವೊಂದು ಪುದುಕೊಟ್ಟೈ ಜಿಲ್ಲೆಯ ಕೀರನೂರ್ ಬಳಿಯ ತಿರುಚಿ-ಪುದುಕೊಟ್ಟೈ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ತಿರುಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಎಂಜಿನ್ ವೈಫಲ್ಯದಿಂದಾಗಿ ತರಬೇತಿ ಪೈಲಟ್ಗಳು ವಿಮಾನವನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದಾರೆ. ಈ ವೇಳೆ ಪೈಲಟ್ ಮತ್ತು ತರಬೇತಿ ಪೈಲಟ್ ಇಬ್ಬರೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ತಾಂತ್ರಿಕ ವೈಫಲ್ಯ ತಿಳಿಯುತ್ತಲೇ ತಿರುಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳೀಯ ಪೊಲೀಸರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಖಾಸಗಿ ಕಂಪನಿಯ ಒಡೆತನ ಹೊಂದಿರುವ ಮತ್ತು ಸೇಲಂನಿಂದ ಕಾರ್ಯ ನಿರ್ವಹಿಸುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಕಾರೈಕುಡಿ ವಾಯುಪ್ರದೇಶಕ್ಕೆ ತೆರಳುತ್ತಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ತಿರುಚ್ಚಿ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ವಿಮಾನವನ್ನು ಪರಿಶೀಲಿಸಿದ್ದಾರೆ. ಬಿಝಿ ರೋಡ್ ನಲ್ಲಿ ವಿಮಾನ ಲ್ಯಾಂಡ್ ಆಗುತ್ತಲೇ ಜನರು ಅಚ್ಚರಿಗೀಡಾಗಿದ್ದಾರೆ. ಆದರೆ ಯಾವುದೇ ವಾಹನಕ್ಕೆ ಡಿಕ್ಕಿಯಾಗದೆ ಸೇಫ್ ಆಗಿ ಲ್ಯಾಂಡ್ ಆಗಿದೆ. ರಸ್ತೆಯಲ್ಲಿ ಲ್ಯಾಂಡ್ ಆದ ವಿಮಾನವನ್ನು ನೋಡಲು ಜನರು ಅಚ್ಚರಿಯಿಂದ ಸೇರಿದ್ದಾರೆ.
ಸೆಸ್ನಾ ವಿಮಾನವು ಸೇಲಂನ ಎಕ್ವೀರ್ ಫ್ಲೈಯಿಂಗ್ ಕ್ಲಬ್ ಒಡೆತನದಲ್ಲಿದೆ. ಡಿಜಿಸಿಎ ಅಧಿಕಾರಿಗಳ ತನಿಖೆಯ ನಂತರವೇ ಎಂಜಿನ್ ವೈಫಲ್ಯಕ್ಕೆ ನಿಖರವಾದ ಕಾರಣ ತಿಳಿಯಲಿದೆ.
Single-Engine Training Aircraft Makes Emergency Landing on Trichy-Pudukottai Highway.
— RT_India (@RT_India_news) November 13, 2025
Two people on board were not injured, and there was no damage to the public property when the… pic.twitter.com/zcw20Ooqp7
A training aircraft made an emergency landing on the Tiruchi–Pudukottai National Highway near Keeranur in Pudukottai district, surprising motorists and onlookers on Tuesday.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm