ಬ್ರೇಕಿಂಗ್ ನ್ಯೂಸ್
21-11-25 02:26 pm HK News Desk ದೇಶ - ವಿದೇಶ
ತಿರುವನಂತಪುರಂ, ನ.21 : ಶಬರಿಮಲೆ ಚಿನ್ನ ಲೂಟಿ ಪ್ರಕರಣದಲ್ಲಿ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ)ಯ ಮಾಜಿ ಅಧ್ಯಕ್ಷ, ಕಮ್ಯುನಿಸ್ಟ್ ಪಕ್ಷದ ಶಾಸಕ ಎ.ಪದ್ಮಕುಮಾರ್ ಅವರನ್ನು ಎಸ್ಐಟಿ ಬಂಧಿಸಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿದೆ.
ಗುರುವಾರ ಬೆಳಗ್ಗೆ ರಹಸ್ಯ ಕೇಂದ್ರಕ್ಕೆ ಕರೆಸಿ ಗಂಟೆಗಳ ಕಾಲ ವಿಚಾರಣೆ ನಡೆಸಿದ ಎಸ್ಐಟಿ ಪೊಲೀಸರು ಸಂಜೆ ವೇಳೆಗೆ ಪದ್ಮಕುಮಾರ್ ಅವರನ್ನು ಬಂಧಿಸಿದೆ. ಸಿಪಿಎಂ ಪತ್ತನಂತಿಟ್ಟ ಜಿಲ್ಲಾ ಸಮಿತಿ ಸದಸ್ಯನಾಗಿರುವ ಪದ್ಮಕುಮಾರ್ ಕೋನ್ನಿ ಕ್ಷೇತ್ರದ ಶಾಸಕರಾಗಿದ್ದಾರೆ. ಪ್ರಕರಣದಲ್ಲಿ ಬಂಧಿತರಾದ ಎಲ್ಲ ಆರೋಪಿಗಳು ಮತ್ತು ದೇವಸ್ವಂ ನೌಕರರು ಪದ್ಮಕುಮಾರ್ ವಿರುದ್ಧ ಹೇಳಿಕೆ ನೀಡಿದ್ದರು. ಪ್ರಕರಣದಲ್ಲಿ ಬಂಧಿತನಾದ ಒಂದನೇ ಆರೋಪಿ ಉಣ್ಣಿಕೃಷ್ಣನ್ ಪೋಟ್ಟಿಗೆ ಪದ್ಮಕುಮಾರ್ ಚಿನ್ನ ಕಳ್ಳತನಕ್ಕೆ ಸ್ವಾತಂತ್ರ್ಯ ನೀಡಿದ್ದರು ಎಂದು ದೇವಸ್ವಂ ನೌಕರರು ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ.
ಇದಲ್ಲದೆ ಉನ್ನಿಕೃಷ್ಣನ್ ಪೋಟ್ಟಿಯ ಸಂಬಂಧಿಕರು, ಸ್ನೇಹಿತರು ದೇವಸ್ವಂ ಅಧ್ಯಕ್ಷರ ಕೊಠಡಿಯನ್ನು ಬಳಸುತ್ತಿದ್ದರು. ಅವರಿಗೆ ಪೂಜೆ ಹಾಗೂ ಬುಕ್ಕಿಂಗ್ನಲ್ಲಿ ವಿಶೇಷ ಪ್ರಾಶಸ್ತ್ರ ನೀಡಲಾಗುತ್ತಿತ್ತು ಎಂದು ನೌಕರರು ವಿಶೇಷ ತನಿಖಾ ತಂಡಕ್ಕೆ ತಿಳಿಸಿದ್ದಾರೆ. ಪೋಟ್ಟಿ ಮತ್ತು ಪದ್ಮಕುಮಾರ್ ನಡುವೆ ಹಣಕಾಸಿನ ವಹಿವಾಟು ನಡೆದಿರುವ ಬಗ್ಗೆಯೂ ಎಸ್ಐಟಿಗೆ ಸೂಚನೆ ಲಭಿಸಿದೆ.
ದ್ವಾರಪಾಲಕ ಶಿಲ್ಪ, ಬಾಗಿಲ ಚೌಕಟ್ಟಿನ ಚಿನ್ನದ ಪದರವನ್ನು ತಾಮ್ರವಾಗಿ ಉಲ್ಲೇಖಿಸುವ ಆದೇಶವನ್ನು ಪದ್ಮ ಕುಮಾರ್ ಅವರ ಸೂಚನೆಯಂತೆ ನೀಡಲಾಗಿದೆ ಎಂದು ಬಂಧಿತ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಪದ್ಮಕುಮಾರ್ ಅವರ ಆರ್ಥಿಕ ವ್ಯವಹಾರಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸುತ್ತಿದೆ. ಇದೀಗ ಮಂಡಳಿ ಅಧ್ಯಕ್ಷರಾಗಿದ್ದ ಪದ್ಮಕುಮಾರ್ ಅವರನ್ನು ಬಾಗಿಲು ಚೌಕಟ್ಟಿನ ಪದರದ ಚಿನ್ನ ಲೂಟಿ ಪ್ರಕರಣದಲ್ಲಿ ಎಂಟನೇ ಆರೋಪಿಯನ್ನಾಗಿ ಎಸ್ಐಟಿ ಹೆಸರಿಸಿದೆ. ಪದ್ಮಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಎರಡು ಬಾರಿ ನೋಟಿಸ್ ಜಾರಿ ಮಾಡಿತ್ತು. ಎನ್.ವಾಸು ಬಂಧನದ ಬಳಿಕ ಎರಡನೇ ಬಾರಿ ನೋಟಿಸ್ ನೀಡಲಾಗಿತ್ತು. ಎನ್.ವಾಸು ಟಿಡಿಬಿ ಆಯುಕ್ತರಾಗಿದ್ದಾಗ ಪದ್ಮ ಕುಮಾರ್ ಅಧ್ಯಕ್ಷರಾಗಿದ್ದರು. ಪ್ರಕರಣದಲ್ಲಿ ಇದುವರೆಗೆ ಉಣ್ಣಿಕೃಷ್ಣನ್ ಪೋಟ್ಟಿ, ಟಿಡಿಬಿ ಮಾಜಿ ಆಡಳಿತ ಅಧಿಕಾರಿ ಮುರಾರಿ ಬಾಬು, ಮಾಜಿ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಸುಧೀಶ್ ಕುಮಾರ್, ಮಾಜಿ ಆಯುಕ್ತ ಮತ್ತು ಅಧ್ಯಕ್ಷ ಎನ್.ವಾಸು ಅವರನ್ನು ಬಂಧಿಸಲಾಗಿದೆ. ಪದ್ಮಕುಮಾರ್ ಅವರನ್ನು ರಾತ್ರಿ ಕೊಲ್ಲಂ ವಿಜಿಲೆನ್ಸ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
In a major development in the Sabarimala gold loot case, the Special Investigation Team (SIT) has arrested A. Padmakumar, former President of the Travancore Devaswom Board (TDB) and present CPM MLA from Konni constituency. With this, the total number of arrests in the case has risen to five.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm