ಬ್ರೇಕಿಂಗ್ ನ್ಯೂಸ್
28-11-25 07:28 pm HK News Desk ದೇಶ - ವಿದೇಶ
ಪಣಜಿ, ನ.28 : ಗೋವಾದ ಕಾಣಕೋಣ ಎಂಬಲ್ಲಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಪ್ರತಿಷ್ಠಾಪನೆಗೊಂಡ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ.
ಗೋವಾದ ಪರ್ತಗಾಳಿ ಮಠವು "ದಕ್ಷಿಣದ ಅಯೋಧ್ಯೆ'ಯಾಗಿ ರೂಪುಗೊಳ್ಳುತ್ತಿದೆ. ಬಿಲ್ಲಿನಾಕಾರದಲ್ಲಿ ರೂಪಿಸಲಾಗಿರುವ "ಆದರ್ಶ ಧಾಮ್' ಪ್ರದೇಶದಲ್ಲಿ ಶ್ರೀರಾಮನ ಬೃಹತ್ ಮೂರ್ತಿಯನ್ನು ಇರಿಸಲಾಗಿದೆ. ಮೂರ್ತಿಯನ್ನು ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರ ಜೊತೆ ಮೋದಿ ಅನಾವರಣಗೊಳಿಸಿದರು.





ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ "ಸಾರ್ಧ ಪಂಚ ಶತಮಾನೋತ್ಸವ' ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಾಯಿತು.


ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ. ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ್ದ ಪ್ರಖ್ಯಾತ ಶಿಲ್ಪಿ "ಪದ್ಮಭೂಷಣ' ಪುರಸ್ಕೃತ ರಾಮ ಸುತಾರ್ ಅವರೇ 77 ಅಡಿ ಎತ್ತರದ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ.
Prime Minister Narendra Modi inaugurated the world’s tallest 77-foot bronze statue of Lord Rama at Kanakona in Goa, installed by the Gokarna Partagali Jeevottam Math. The newly developed “Adarsh Dham,” designed in the shape of a bow, is now being hailed as the “Ayodhya of the South.”
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm