ಬ್ರೇಕಿಂಗ್ ನ್ಯೂಸ್
28-11-25 07:28 pm HK News Desk ದೇಶ - ವಿದೇಶ
ಪಣಜಿ, ನ.28 : ಗೋವಾದ ಕಾಣಕೋಣ ಎಂಬಲ್ಲಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಪ್ರತಿಷ್ಠಾಪನೆಗೊಂಡ ಜಗತ್ತಿನ ಅತಿ ಎತ್ತರದ (77 ಅಡಿ) ಶ್ರೀರಾಮನ ಕಂಚಿನ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ.
ಗೋವಾದ ಪರ್ತಗಾಳಿ ಮಠವು "ದಕ್ಷಿಣದ ಅಯೋಧ್ಯೆ'ಯಾಗಿ ರೂಪುಗೊಳ್ಳುತ್ತಿದೆ. ಬಿಲ್ಲಿನಾಕಾರದಲ್ಲಿ ರೂಪಿಸಲಾಗಿರುವ "ಆದರ್ಶ ಧಾಮ್' ಪ್ರದೇಶದಲ್ಲಿ ಶ್ರೀರಾಮನ ಬೃಹತ್ ಮೂರ್ತಿಯನ್ನು ಇರಿಸಲಾಗಿದೆ. ಮೂರ್ತಿಯನ್ನು ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರ ಜೊತೆ ಮೋದಿ ಅನಾವರಣಗೊಳಿಸಿದರು.





ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ "ಸಾರ್ಧ ಪಂಚ ಶತಮಾನೋತ್ಸವ' ಕಾರ್ಯಕ್ರಮದ ನಿಮಿತ್ತ ಪ್ರಧಾನಿಯವರು ವಿಶೇಷ ಅಂಚೆ ಚೀಟಿ ಹಾಗೂ ನಾಣ್ಯವನ್ನೂ ಬಿಡುಗಡೆಗೊಳಿಸಿದ್ದಾರೆ. ಜೊತೆಗೆ ಶ್ರೀರಾಮನ ಮೂರ್ತಿ ಸುತ್ತಲೂ ರಾಮಾಯಣ ಥೀಮ್ ಪಾರ್ಕ್, ಶ್ರೀರಾಮನ ಮಹಿಮೆ ಸಾರುವ ಮ್ಯೂಸಿಯಂ ಹಾಗೂ 7ಡಿ ರಂಗಮಂದಿರಕ್ಕೂ ಚಾಲನೆ ನೀಡಲಾಯಿತು.


ಶ್ರೀಮಠಕ್ಕೆ 550 ಸಂವತ್ಸರ ತುಂಬಿದ ಹಿನ್ನೆಲೆಯಲ್ಲಿ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದರು, ದೇಶದ 120 ಕೇಂದ್ರಗಳಲ್ಲಿ 550 ಕೋಟಿ ಶ್ರೀರಾಮ ನಾಮ ಜಪ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಆದರೆ, 590 ಕೋಟಿಗೂ ಹೆಚ್ಚು ಶ್ರೀರಾಮ ನಾಮ ಜಪ ನಡೆದು ದಾಖಲೆ ಸೃಷ್ಟಿಸಿದೆ. ಗುಜರಾತ್ ನಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬೆಂಗಳೂರಿನಲ್ಲಿ ಕೆಂಪೇಗೌಡರ ಮೂರ್ತಿಗಳನ್ನು ವಿನ್ಯಾಸಗೊಳಿಸಿದ್ದ ಪ್ರಖ್ಯಾತ ಶಿಲ್ಪಿ "ಪದ್ಮಭೂಷಣ' ಪುರಸ್ಕೃತ ರಾಮ ಸುತಾರ್ ಅವರೇ 77 ಅಡಿ ಎತ್ತರದ ಈ ಶ್ರೀರಾಮನ ಮೂರ್ತಿಯನ್ನು ನಿರ್ಮಿಸಿದ್ದಾರೆ.
Prime Minister Narendra Modi inaugurated the world’s tallest 77-foot bronze statue of Lord Rama at Kanakona in Goa, installed by the Gokarna Partagali Jeevottam Math. The newly developed “Adarsh Dham,” designed in the shape of a bow, is now being hailed as the “Ayodhya of the South.”
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm