ಬ್ರೇಕಿಂಗ್ ನ್ಯೂಸ್
29-12-20 04:11 pm Headline Karnataka News Network ದೇಶ - ವಿದೇಶ
ಖಾನ್ಪುರ, ಡಿ.29: ಗ್ಯಾಂಗ್ ಸ್ಟರ್, ಭೂಗತ ಪಾತಕಿಗಳ ಫೋಟೋಗಳನ್ನು ಪೊಲೀಸ್ ಠಾಣೆಗಳ ಹಿಟ್ ಲಿಸ್ಟ್ ನಲ್ಲಿ ಅಥವಾ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿ ಹಾಕಿಡುವುದನ್ನು ಕೇಳಿದ್ದೇವೆ. ಆದರೆ, ಉತ್ತರ ಪ್ರದೇಶದಲ್ಲಿ ಭೂಗತ ಪಾತಕಿ ಛೋಟಾ ರಾಜನ್, ಮುನ್ನಾ ಬಜರಂಗಿಯಂತಹ ಗ್ಯಾಂಗ್ ಸ್ಟರ್ ಗಳ ಫೋಟೊಗಳನ್ನು ಸ್ಟಾಂಪ್ ಪೇಪರಿನಲ್ಲಿ ಪ್ರಿಂಟ್ ಮಾಡಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ. ಈ ರೀತಿಯ ಅಂಚೆ ಚೀಟಿ ಖಾನ್ ಪುರದ ಪ್ರಧಾನ ಅಂಚೆ ಇಲಾಖೆಯಲ್ಲಿ ಮುದ್ರಣವಾಗಿದೆ.

ಅಂಚೆ ಇಲಾಖೆಯಲ್ಲಿ ಮೈ ಸ್ಟಾಂಪ್ ಎನ್ನುವ ಯೋಜನೆ ಇದ್ದು, ಅದರಲ್ಲಿ ಕಾರ್ಪೊರೇಟ್ ಸಂಸ್ಥೆಗಳು, ಸಂಘಟನೆಗಳಿಗೆ ತಮ್ಮ ಹೆಸರಲ್ಲಿ ಸ್ಟಾಂಪ್ ಪೇಪರ್ ತರಬಹುದಾಗಿದೆ. ಸಂಘಟನೆಯ ಲೋಗೊ ಮತ್ತು ಅದಕ್ಕೆ ಸಂಬಂಧಪಟ್ಟ ಫೋಟೋಗಳನ್ನು ಮುದ್ರಿಸಲು ಅವಕಾಶ ಇರುತ್ತದೆ. ಯೋಜನೆಯಡಿ 12 ಸ್ಟಾಂಪ್ ಗಳುಳ್ಳ ಹಾಳೆ ದೊರಕಲಿದ್ದು, ಪ್ರತೀ ಅಂಚೆ ಚೀಟಿಯ ಮುಖಬೆಲೆ 5 ರೂ. ಆಗಿರುತ್ತದೆ. 12 ಸ್ಟಾಂಪಿನ ಒಂದು ಶೀಟ್ ಹೊರತರಲು 300 ರೂ. ಖರ್ಚು ತಗಲುತ್ತದೆ ಎನ್ನುವ ಮಾಹಿತಿ ಪೋಸ್ಟಲ್ ವೆಬ್ ನಲ್ಲಿ ಸಿಗುತ್ತದೆ.

ಈ ಬಗ್ಗೆ ಮಾಹಿತಿ ನೀಡಿರುವ ಖಾನ್ಪುರ ಅಂಚೆ ಇಲಾಖೆ ಪ್ರಧಾನ ಕಚೇರಿಯ ಪೋಸ್ಟ್ ಮಾಸ್ಟರ್ ಜನರಲ್ ವಿನೋದ್ ಕುಮಾರ್ ವರ್ಮಾ, ಮೈ ಸ್ಟಾಂಪ್ ಯೋಜನೆಯಡಿ ಖಾಸಗಿ ವ್ಯಕ್ತಿಗಳು ಕೂಡ ಪೋಸ್ಟಲ್ ಸ್ಟಾಂಪ್ ಹೊರತರಲು ಸಾಧ್ಯವಿದೆ. ಅದಕ್ಕಾಗಿ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಂಚೆ ಕಚೇರಿಗೆ ಬಂದು ನೀಡಬೇಕಾಗುತ್ತದೆ. ವೆಬ್ ಕ್ಯಾಮ್ ಮೂಲಕ ಪೋಸ್ಟೇಜ್ ಸ್ಟಾಂಪಿನ ಫೋಟೋಗಳನ್ನು ತೆಗೆಯಲಾಗುತ್ತದೆ. ಅದರಂತೆ, ಖಾನ್ಪುರದಲ್ಲಿ ಇಬ್ಬರು ಮಾಧ್ಯಮದ ವ್ಯಕ್ತಿಗಳು ಮೈ ಸ್ಪಾಂಪ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ತಮ್ಮ ಹೆಸರನ್ನು ಮುನ್ನಾ ಬಜರಂಗಿ(ಪ್ರೇಮ್ ಪ್ರಕಾಶ್) ಮತ್ತು ಛೋಟಾ ರಾಜನ್ (ರಾಜೇಂದ್ರ ಎಸ್.) ಎಂದು ನಮೂದಿಸಿದ್ದರು.

ಮುನ್ನ ಮತ್ತು ಛೋಟಾ ರಾಜನ್ ಫೋಟೋಗಳನ್ನು ನೀಡಿದ್ದಲ್ಲದೆ, ತಮ್ಮದೇ ಐಡಿ ಕಾರ್ಡನ್ನು ನೀಡಿದ್ದರು. ಈ ವೇಳೆ, ಪೋಸ್ಟ್ ಮ್ಯಾನ್ ಬಳಿ ಕೇಳಿದಾಗ, ಅವರಿಬ್ಬರು ನನಗೆ ಗೊತ್ತಿರುವ ಮಂದಿಯೇ. ನಕಲಿ ವ್ಯಕ್ತಿಗಳಲ್ಲ ಎಂದಿದ್ದಾರೆ. ಅದರಂತೆ, ಹೆಚ್ಚುವರಿ ತನಿಖೆಗೆ ಒಳಪಡಿಸದೆ ಸ್ಟಾಂಪ್ ಪ್ರಿಂಟ್ ಆಗಿತ್ತು ಎಂದಿದ್ದಾರೆ.
ಪ್ರಕರಣ ಸಂಬಂಧಿಸಿ, ಈಗ ಪೋಸ್ಟಲ್ ಕಚೇರಿಯ ಕ್ಲರ್ಕ್ ಒಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಅಲ್ಲದೆ, ಆರು ಮಂದಿ ವಿರುದ್ಧ ಇಲಾಖೆ ತನಿಖೆಗೆ ಆದೇಶ ಮಾಡಲಾಗಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm