ಬ್ರೇಕಿಂಗ್ ನ್ಯೂಸ್
02-12-25 11:19 pm HK News Desk ದೇಶ - ವಿದೇಶ
ಕೋಜಿಕ್ಕೋಡ್, ಡಿ.2 : ಅಯೋಧ್ಯೆ ರಾಮಮಂದಿರ ಮಾತ್ರ ಅಲ್ಲ.. ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್ಐ) ಮಾಜಿ ಪ್ರಾದೇಶಿಕ ನಿರ್ದೇಶಕ ಕೆ.ಕೆ. ಮುಹಮ್ಮದ್ ಹೇಳಿದ್ದಾರೆ.
ಕೇರಳದ ಕೋಝಿಕ್ಕೋಡ್ ನಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಕೆ.ಕೆ.ಮುಹಮ್ಮದ್, 'ನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕಾದೀತು ಎಂದು ನಾನು ಹಿಂದೆಯೇ ಹೇಳಿದ್ದೆ. ಶ್ರೀಕೃಷ್ಣನ ಜನ್ಮಸ್ಥಳ ಮಥುರಾ ಮತ್ತು ಕಾಶಿ ಶಿವನ ದೇವಸ್ಥಾನಕ್ಕೆ ಸಂಬಂಧ ಹೊಂದಿರುವ ಜ್ಞಾನವಾಪಿಯಲ್ಲಿರುವ ಮಸೀದಿಗಳನ್ನು ಹಿಂದುಗಳಿಗೆ ಬಿಟ್ಟು ಕೊಡಬೇಕು ಎಂದು ಅವರು ಹೇಳಿದ್ದಾರೆ.
ಮುಸ್ಲಿಮರು ಹಿಂದು ಸಮುದಾಯಕ್ಕೆ ಹಸ್ತಾಂತರಿಸಬೇಕಾದ ಎರಡು ಪ್ರಮುಖ ಸ್ಥಳಗಳು ಇವು. ಏಕೆಂದರೆ ಮೆಕ್ಕಾ ಮತ್ತು ಮದೀನಾ ಮುಸ್ಲಿಮರಿಗೆ ಎಷ್ಟು ಮುಖ್ಯವೋ ಅಷ್ಟೇ ಈ ಎರಡು ಪ್ರಮುಖ ಸ್ಥಳಗಳು ಹಿಂದೂಗಳಿಗೂ ಅಷ್ಟೇ ಮುಖ್ಯವಾಗುತ್ತದೆ. ಹಾಗೆಂದು ಎಲ್ಲ ಮಸೀದಿಗಳ ಹಿಂದೆಯೂ ಹಿಂದುಗಳು ಹೋಗುವುದನ್ನು ಬಿಟ್ಟು ಬಿಡಬೇಕು ಎಂದು ಮುಹಮ್ಮದ್ ಹೇಳಿದ್ದಾರೆ.
ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ..
ಇದೇ ವೇಳೆ ಮುಸ್ಲಿಮರಿಗಾಗಿ ಪ್ರತ್ಯೇಕ ದೇಶ ಪಾಕಿಸ್ತಾನವನ್ನು ನೀಡಿದ ನಂತರವೂ, ಭಾರತ ಇಂದು ಜಾತ್ಯತೀತ ದೇಶವಾಗಿದ್ದರೆ, ಅದು ಹಿಂದೂಗಳ ಉದಾರತೆ ಕಾರಣದಿಂದಾಗಿ ಮಾತ್ರ ಎಂಬುದನ್ನು ಮುಸ್ಲಿಮರು ಒಪ್ಪಬೇಕು. ಮುಸ್ಲಿಂ ಬಾಹುಳ್ಯ ದೇಶವಾಗಿದ್ದರೆ, ಅದು ಎಂದಿಗೂ ಜಾತ್ಯತೀತ ದೇಶವಾಗುತ್ತಿರಲಿಲ್ಲ. ಈ ಸೂಕ್ಷ್ಮ ಸಂಗತಿಯನ್ನು ಮುಸ್ಲಿಮರು ಅರಿತುಕೊಳ್ಳಬೇಕು. ಇದಕ್ಕಾಗಿ ಅವರ ಕಡೆಯಿಂದ ಕೆಲವು ಸನ್ನೆಗಳು ಬರಬೇಕಾಗಿದೆ ಎಂದು ಹೇಳಿದರು.
ಅಲ್ಲದೆ, ನೀವು ಕಮ್ಯುನಿಸ್ಟ್ ಇತಿಹಾಸಕಾರರೊಂದಿಗೆ ಈ ವಿಷಯಗಳ ಬಗ್ಗೆ ಮಾತನಾಡಬಾರದು. ಏಕೆಂದರೆ ಅವರು ಸಮಸ್ಯೆಯನ್ನು ಸಂಕೀರ್ಣಗೊಳಿಸುತ್ತಾರೆ. ಮುಸ್ಲಿಮರಲ್ಲು ಒಂದು ವಿಭಾಗವು ರಾಮ ಜನ್ಮಭೂಮಿಯನ್ನು ಹಸ್ತಾಂತರಿಸಲು ಸಿದ್ಧವಾಗಿತ್ತು. ರಾಮನ ಜನ್ಮಭೂಮಿ ಎನ್ನುವ ಕಾರಣಕ್ಕಾಗಿ. ಈ ಬಗ್ಗೆ ಅನೇಕರೊಂದಿಗೆ ಮಾತನಾಡಿದ್ದೇನೆ. ಆದರೆ ಕಮ್ಯುನಿಸ್ಟ್ ಇತಿಹಾಸಕಾರರು ಮುಸ್ಲಿಮರ ಮನಸ್ಸನ್ನು ವಿಷಪೂರಿತಗೊಳಿಸುತ್ತಾರೆ ಎಂದಿದ್ದಾರೆ.
In an interaction with the media in Kozhikode, former Archaeological Survey of India (ASI) Regional Director K.K. Muhammed stated that along with the Ayodhya Ram Temple issue, two more historical sites—Mathura (believed to be the birthplace of Lord Krishna) and the Gyanvapi site in Varanasi—should ideally be handed over to Hindus through mutual understanding between communities.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm