ಬ್ರೇಕಿಂಗ್ ನ್ಯೂಸ್
03-12-25 07:14 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು. ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ನೆಹರು ಪ್ರಯತ್ನಕ್ಕೆ ತಡೆಯೊಡ್ಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯುತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ ಮೌಲ್ಯಗಳನ್ನು ಕಾಯ್ದುಕೊಂಡಿದ್ದರು ಎಂದು ಹೇಳಿದರು.
ನೆಹರೂ ಸಾರ್ವಜನಿಕ ಹಣದಿಂದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದರು. ಆದರೆ ಇದಕ್ಕೆ ಮೊದಲಿಗರಾಗಿ ಪಟೇಲ್ ವಿರೋಧ ವ್ಯಕ್ತಪಡಿಸಿದರು. ಅವರು ನೆಹರು ಯೋಜನೆ ಜಾರಿ ಆಗದಂತೆ ತಡೆದಿದ್ದರು ಎಂದು ಸಿಂಗ್ ಹೇಳಿದ್ದಾರೆ.
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ಜನಸಾಮಾನ್ಯರು ದಾನ ಮಾಡಿದ 30 ಲಕ್ಷ ರೂ.ಗಳನ್ನು ಬಳಸಿ ದೇಗುಲ ಪುನರ್ ಸ್ಥಾಪಿಸಲಾಯಿತು. ದೇಗುಲ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸಿಲ್ಲ, ಸಾರ್ವಜನಿಕ ದೇಣಿಗೆಗಳನ್ನು ಮಾತ್ರ ಬಳಸಲಾಗಿತ್ತು, ಇದೇ ರೀತಿಯಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೂ ಯಾವುದೇ ಸರ್ಕಾರಿ ಹಣ ಕೊಡಲಾಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದರು. ಇದು ನಿಜವಾದ ಸೆಕ್ಯುಲರಿಸಂ ಎಂದು ಅವರು ಅಭಿಪ್ರಾಯಪಟ್ಟರು.
India’s Defence Minister Rajnath Singh has claimed that former Prime Minister Jawaharlal Nehru once proposed using public funds for the construction of the Babri Masjid in Ayodhya, but Sardar Vallabhbhai Patel strongly opposed the idea and prevented it from happening.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm