ಬ್ರೇಕಿಂಗ್ ನ್ಯೂಸ್
03-12-25 07:14 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು. ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ನೆಹರು ಪ್ರಯತ್ನಕ್ಕೆ ತಡೆಯೊಡ್ಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯುತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ ಮೌಲ್ಯಗಳನ್ನು ಕಾಯ್ದುಕೊಂಡಿದ್ದರು ಎಂದು ಹೇಳಿದರು.
ನೆಹರೂ ಸಾರ್ವಜನಿಕ ಹಣದಿಂದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದರು. ಆದರೆ ಇದಕ್ಕೆ ಮೊದಲಿಗರಾಗಿ ಪಟೇಲ್ ವಿರೋಧ ವ್ಯಕ್ತಪಡಿಸಿದರು. ಅವರು ನೆಹರು ಯೋಜನೆ ಜಾರಿ ಆಗದಂತೆ ತಡೆದಿದ್ದರು ಎಂದು ಸಿಂಗ್ ಹೇಳಿದ್ದಾರೆ.
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ಜನಸಾಮಾನ್ಯರು ದಾನ ಮಾಡಿದ 30 ಲಕ್ಷ ರೂ.ಗಳನ್ನು ಬಳಸಿ ದೇಗುಲ ಪುನರ್ ಸ್ಥಾಪಿಸಲಾಯಿತು. ದೇಗುಲ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸಿಲ್ಲ, ಸಾರ್ವಜನಿಕ ದೇಣಿಗೆಗಳನ್ನು ಮಾತ್ರ ಬಳಸಲಾಗಿತ್ತು, ಇದೇ ರೀತಿಯಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೂ ಯಾವುದೇ ಸರ್ಕಾರಿ ಹಣ ಕೊಡಲಾಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದರು. ಇದು ನಿಜವಾದ ಸೆಕ್ಯುಲರಿಸಂ ಎಂದು ಅವರು ಅಭಿಪ್ರಾಯಪಟ್ಟರು.
India’s Defence Minister Rajnath Singh has claimed that former Prime Minister Jawaharlal Nehru once proposed using public funds for the construction of the Babri Masjid in Ayodhya, but Sardar Vallabhbhai Patel strongly opposed the idea and prevented it from happening.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm