ಬ್ರೇಕಿಂಗ್ ನ್ಯೂಸ್
03-12-25 07:14 pm HK News Desk ದೇಶ - ವಿದೇಶ
ನವದೆಹಲಿ, ಡಿ.3: ಭಾರತದ ಮೊದಲ ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣಕ್ಕಾಗಿ ಸಾರ್ವಜನಿಕ ನಿಧಿ ಬಳಸಲು ಬಯಸಿದ್ದರು. ಆದರೆ ಸರ್ದಾರ್ ವಲ್ಲಭಭಾಯಿ ಪಟೇಲ್ ತೀವ್ರವಾಗಿ ವಿರೋಧಿಸಿ ನೆಹರು ಪ್ರಯತ್ನಕ್ಕೆ ತಡೆಯೊಡ್ಡಿದ್ದರು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಗುಜರಾತಿನ ವಡೋದರ ಹತ್ತಿರದ ಸಾಧ್ಲಿ ಗ್ರಾಮದಲ್ಲಿ ಸರ್ದಾರ್ ಪಟೇಲ್ 150ನೇ ಜಯಂತ್ಯುತ್ಸವದ ‘ಯುನಿಟಿ ಮಾರ್ಚ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಟೇಲ್ ನಿಜವಾದ ಸೆಕ್ಯುಲರ್ ನಾಯಕರಾಗಿದ್ದರು, ಯಾರನ್ನೂ ತೃಪ್ತಿಪಡಿಸುವ ರಾಜಕೀಯ ಮಾಡದೆ ಸಮಾನತೆಯ ಮೌಲ್ಯಗಳನ್ನು ಕಾಯ್ದುಕೊಂಡಿದ್ದರು ಎಂದು ಹೇಳಿದರು.
ನೆಹರೂ ಸಾರ್ವಜನಿಕ ಹಣದಿಂದ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಿಸಲು ಬಯಸಿದ್ದರು. ಆದರೆ ಇದಕ್ಕೆ ಮೊದಲಿಗರಾಗಿ ಪಟೇಲ್ ವಿರೋಧ ವ್ಯಕ್ತಪಡಿಸಿದರು. ಅವರು ನೆಹರು ಯೋಜನೆ ಜಾರಿ ಆಗದಂತೆ ತಡೆದಿದ್ದರು ಎಂದು ಸಿಂಗ್ ಹೇಳಿದ್ದಾರೆ.
ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ಜನಸಾಮಾನ್ಯರು ದಾನ ಮಾಡಿದ 30 ಲಕ್ಷ ರೂ.ಗಳನ್ನು ಬಳಸಿ ದೇಗುಲ ಪುನರ್ ಸ್ಥಾಪಿಸಲಾಯಿತು. ದೇಗುಲ ನಿರ್ಮಾಣಕ್ಕೆ ಸರ್ಕಾರದ ಹಣ ಬಳಸಿಲ್ಲ, ಸಾರ್ವಜನಿಕ ದೇಣಿಗೆಗಳನ್ನು ಮಾತ್ರ ಬಳಸಲಾಗಿತ್ತು, ಇದೇ ರೀತಿಯಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೂ ಯಾವುದೇ ಸರ್ಕಾರಿ ಹಣ ಕೊಡಲಾಗಿಲ್ಲ ಎಂದು ರಾಜನಾಥ್ ಸಿಂಗ್ ಸ್ಪಷ್ಟ ಪಡಿಸಿದರು. ಇದು ನಿಜವಾದ ಸೆಕ್ಯುಲರಿಸಂ ಎಂದು ಅವರು ಅಭಿಪ್ರಾಯಪಟ್ಟರು.
India’s Defence Minister Rajnath Singh has claimed that former Prime Minister Jawaharlal Nehru once proposed using public funds for the construction of the Babri Masjid in Ayodhya, but Sardar Vallabhbhai Patel strongly opposed the idea and prevented it from happening.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm