ಬ್ರೇಕಿಂಗ್ ನ್ಯೂಸ್
09-12-25 11:03 pm HK News Desk ದೇಶ - ವಿದೇಶ
ನವದೆಹಲಿ, ಡಿ.10: ಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆಯಲೆತ್ನಿಸಿ ಅವಾಂತರ ಸೃಷ್ಟಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ದೆಹಲಿಯ ನ್ಯಾಯಾಲಯ ಸಂಕೀರ್ಣ ಒಂದರಲ್ಲಿ ಚಪ್ಪಲಿಯೇಟು ನೀಡಲಾಗಿದೆ.
ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯ ಸಂಕೀರ್ಣದಲ್ಲಿ ಕೆಲವರು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ರಾಕೇಶ್ ಕಿಶೋರ್ ಹೇಳಿಕೊಂಡಿದ್ದಾರೆ. ಆದರೆ ಆತ ಯಾರೆಂದು ಗೊತ್ತಾಗಿಲ್ಲ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ, ರಾಕೇಶ್ ಕಿಶೋರ್ ತನ್ನ ಮೇಲೆ ಹಲ್ಲೆ ನಡೆಸುತ್ತಿರುವ ವ್ಯಕ್ತಿಯನ್ನು 'ನೀವು ಯಾರು? ನನ್ನನ್ನು ಏಕೆ ಹೊಡೆಯುತ್ತಿದ್ದೀರಿ?' ಎಂದು ಕೇಳುತ್ತಿರುವುದು ಕಂಡುಬರುತ್ತದೆ. ನಂತರ ಅವರು 'ಸನಾತನ ಧರ್ಮಕ್ಕೆ ಜಯ' ಎಂದು ಕೂಗುತ್ತಾರೆ. ಆದಾಗ್ಯೂ, ಈ ವಿಷಯದ ಬಗ್ಗೆ ಯಾವುದೇ ಪೊಲೀಸ್ ದೂರು ದಾಖಲಾಗಿಲ್ಲ. ಆದರೆ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ಕಾರಣಕ್ಕೆ ರಾಕೇಶ್ ಕಿಶೋರ್ ಮೇಲೆ ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ.
ಈ ಹಿಂದೆ, ವಕೀಲ ರಾಕೇಶ್ ಕಿಶೋರ್ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಹೇಳಿಕೊಂಡಿದ್ದರು. ಆದರೆ ದೇವರು ತಮ್ಮೊಂದಿಗಿದ್ದಾನೆ, ಆದ್ದರಿಂದ ತನಗೆ ಏನೂ ಆಗುವುದಿಲ್ಲ. ಮನೆಯಲ್ಲಿ ಮಾತ್ರ ಪೊಲೀಸರು ಬೀಡು ಬಿಟ್ಟಿದ್ದಾರೆ ಎಂದು ಹೇಳಿದ್ದರು. ನನ್ನ ಜೀವ ಅಪಾಯದಲ್ಲಿದೆ. ಭದ್ರತೆಯ ಬಗ್ಗೆ ನಾನು ಹೆಚ್ಚು ಮಾತನಾಡಲಾರೆ ಎಂದಿದ್ದರು.
ಏತನ್ಮಧ್ಯೆ, ಶೂ ಎಸೆತ ಪ್ರಕರಣದಲ್ಲಿ ಮಾಜಿ ಸಿಜೆಐ ಬಿಆರ್ ಗವಾಯಿ ಅವರು, ರಾಕೇಶ್ ಕಿಶೋರ್ ಅವರನ್ನು ಕೇಸು ಬೇಡವೆಂದು ಹೇಳಿ ಕ್ಷಮಿಸಿದ್ದರು. ರಾಕೇಶ್ ಕಿಶೋರ್ ಅವರನ್ನು ಕ್ಷಮಿಸುವಲ್ಲಿ ಸಿಜೆಐ ಉದಾರತೆ ತೋರಿಸಿದ್ದಾರೆ. ಆದ್ದರಿಂದ ಈ ವಿಷಯವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಲಾಗುವುದು ಎಂದು ನ್ಯಾಯಾಲಯವೂ ಹೇಳಿತ್ತು.
Rakesh Kishore, the lawyer who recently attempted to throw a shoe at former Chief Justice of India B.R. Gavai inside the Supreme Court, was allegedly assaulted inside the Karkardooma Court complex in Delhi. A video circulating on social media shows Kishore being slapped with a slipper by an unidentified man, while he repeatedly asks, “Who are you? Why are you hitting me?” The attacker is heard shouting slogans of “Sanatan Dharm ki Jai.”
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm