ಬ್ರೇಕಿಂಗ್ ನ್ಯೂಸ್
10-12-25 01:17 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ಭಾರತೀಯರ ಅತಿದೊಡ್ಡ ಹಬ್ಬ ದೀಪಾವಳಿ ಬಗ್ಗೆ ಸಂತಸದ ಸುದ್ದಿ ಬಂದಿದೆ. ಯುನೆಸ್ಕೋ ಸಂಸ್ಥೆಯು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬವನ್ನು ಸೇರಿಸಿದೆ.
ದೆಹಲಿಯ ಕೆಂಪು ಕೋಟೆಯಲ್ಲಿ ಆಯೋಜಿಸಲಾದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತ ದೇಶವು ಅಮೂರ್ತ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಅಂತರಸರ್ಕಾರಿ ಸಮಿತಿಯ ಅಧಿವೇಶನವನ್ನು ಆಯೋಜಿಸುತ್ತಿರುವುದು ಇದೇ ಮೊದಲು. ಡಿಸೆಂಬರ್ 8 ರಿಂದ 13 ರವರೆಗೆ ಕೆಂಪು ಕೋಟೆಯಲ್ಲಿ ಸಮಿತಿಯ 20ನೇ ಅಧಿವೇಶನ ನಡೆಯುತ್ತಿದೆ.
ದೀಪಾವಳಿ ಹಬ್ಬವನ್ನು ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಯುನೆಸ್ಕೋದ ಪ್ರತಿನಿಧಿ ಪಟ್ಟಿಗೆ ಸೇರಿಸಲಾಗಿದೆ ಎಂದು ಯುನೆಸ್ಕೋ ಘೋಷಿಸುತ್ತಿದ್ದಂತೆ 'ವಂದೇ ಮಾತರಂ' ಮತ್ತು 'ಭಾರತ್ ಮಾತಾ ಕಿ ಜೈ' ಮಂತ್ರಗಳು ದೆಹಲಿಯ ಕೆಂಪುಕೋಟೆ ಸುತ್ತ ಮೊಳಗಿದವು. ಭಾರತವು ಪ್ರಸ್ತುತ ಯುನೆಸ್ಕೋದ ಮಾನವೀಯತೆಯ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ 15 ಅಂಶಗಳನ್ನು ಸೇರಿಸಿಕೊಂಡಿದೆ. ಇವುಗಳಲ್ಲಿ ಕುಂಭಮೇಳ, ಕೋಲ್ಕತ್ತಾದ ದುರ್ಗಾ ಪೂಜೆ, ಗುಜರಾತ್ನ ಗರ್ಭಾ ನೃತ್ಯ, ಯೋಗ, ವೇದ ಪಠಣದ ಸಂಪ್ರದಾಯ ಮತ್ತು 'ರಾಮಾಯಣ' ಮಹಾಕಾವ್ಯದ ಸಾಂಪ್ರದಾಯಿಕ ಪ್ರದರ್ಶನವಾದ ರಾಮಲೀಲಾ ಸೇರಿವೆ.
ಯುನೆಸ್ಕೋ ಪಟ್ಟಿಯಲ್ಲಿ ದೀಪಾವಳಿ ಸೇರ್ಪಡೆ ಬಗ್ಗೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದು ದೀಪಾವಳಿ ನಮ್ಮ ಸಂಸ್ಕೃತಿ ಮತ್ತು ನೀತಿಯೊಂದಿಗೆ ಬಹಳ ನಿಕಟ ಸಂಬಂಧ ಹೊಂದಿದೆ. ಇದು ನಮ್ಮ ನಾಗರಿಕತೆಯ ಆತ್ಮ. ಇದು ಜ್ಞಾನೋದಯ ಮತ್ತು ಸದಾಚಾರವನ್ನು ನಿರೂಪಿಸುತ್ತದೆ. ಯುನೆಸ್ಕೋ ಅಮೂರ್ತ ಪರಂಪರೆಯ ಪಟ್ಟಿಗೆ ದೀಪಾವಳಿ ಹಬ್ಬ ಸೇರ್ಪಡೆಯು ಹಬ್ಬದ ಜಾಗತಿಕ ಜನಪ್ರಿಯತೆಗೆ ಮತ್ತಷ್ಟು ಕೊಡುಗೆ ನೀಡುತ್ತದೆ. ಪ್ರಭು ಶ್ರೀರಾಮನ ಆದರ್ಶಗಳು ನಮಗೆ ಶಾಶ್ವತವಾಗಿ ಮಾರ್ಗದರ್ಶನ ನೀಡಲಿ ಎಂದು ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.
In a historic and joyous development for Indians worldwide, UNESCO has officially inscribed the Diwali festival into its Intangible Cultural Heritage of Humanity list. The decision was taken during a key session held at Delhi’s Red Fort, where India is hosting the Intergovernmental Committee meeting on intangible cultural heritage for the first time. The 20th session is being held from December 8 to 13.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm