ಬ್ರೇಕಿಂಗ್ ನ್ಯೂಸ್
10-12-25 11:13 pm HK News Desk ದೇಶ - ವಿದೇಶ
ನವದೆಹಲಿ, ಡಿ.10 : ತಮಿಳುನಾಡಿನ ತಿರುಪರನಕುಂದ್ರಂ ಬೆಟ್ಟದಲ್ಲಿ ದರ್ಗಾದ ಬಳಿ ಇರುವ ಕಲ್ಲಿನ ಕಂಬದ ಮೇಲೆ ಕಾರ್ತಿಗೈ ದೀಪ ಬೆಳಗಲು ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಜಿ. ಆರ್ ಸ್ವಾಮಿನಾಥನ್ ವಿರುದ್ಧ ವಿಪಕ್ಷಗಳ ಸಂಸದರು ಮಹಾಭಿಯೋಗ ನಡೆಸಲು ಮುಂದಾಗಿದ್ದು 120 ಸಂಸದರು ಸಹಿ ಹಾಕಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ಮನವಿ ನೀಡಿದ್ದಾರೆ.
ತಮಿಳುನಾಡಿನ ಡಿಎಂಕೆ ಪಕ್ಷ ಜಡ್ಜ್ ವಿರುದ್ಧ ಸಮರ ಸಾರಿದ್ದು, ನ್ಯಾಯಾಧೀಶರ ಆದೇಶ, ಅವರ ನಡೆಗಳು ನ್ಯಾಯಾಂಗದ ಜಾತ್ಯತೀತ, ಪಾರದರ್ಶಕ, ತಾರತಮ್ಯ ಇಲ್ಲದ ಸ್ವಭಾವಗಳ ಬಗ್ಗೆ ಪ್ರಶ್ನೆ ಮೂಡುವಂತೆ ಮಾಡುತ್ತಿದೆ ಎಂದು ತೀವ್ರ ಆಕ್ರೋಶ ಹೊರಹಾಕಿದೆ. ಅಷ್ಟೇ ಅಲ್ಲದೇ ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಡಿಎಂಕೆ ಸಂಸದೆ ಕನಿಮೋಳ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಗೆ ದೂರು ನೀಡಿದ್ದಾರೆ.
ನ್ಯಾಯಾಧೀಶರು ಪ್ರಕರಣಗಳನ್ನು ನಿರ್ದಿಷ್ಟ ರಾಜಕೀಯ ತತ್ವ- ಸಿದ್ಧಾಂತಗಳ ಆಧಾರದಲ್ಲಿ ಸೆಕ್ಯುಲರ್ ತತ್ವಕ್ಕೆ ವಿರುದ್ಧವಾಗಿ ನಿರ್ಧರಿಸುತ್ತಿದ್ದಾರೆ ಎಂದು ವಿಪಕ್ಷ ಸಂಸದರು ಆರೋಪಿಸಿದ್ದಾರೆ. ನ್ಯಾಯಾಧೀಶರನ್ನು ಪದಚ್ಯುತಗೊಳಿಸುವ ನಿರ್ಣಯಕ್ಕೆ ಕನಿಷ್ಠ 100 ಸಂಸದರು ಬೆಂಬಲ ನೀಡಬೇಕಾಗುತ್ತದೆ. ಈಗ ವಿಪಕ್ಷಗಳ 120 ಸಂಸದರು ಸಹಿ ಹಾಕಿದ್ದು ದೂರನ್ನು ಸ್ಪೀಕರ್ ಬಿರ್ಲಾ ಅವರ ಮುಂದಿಟ್ಟಿದ್ದಾರೆ.
ದೇವಾಲಯ ಮತ್ತು ಹತ್ತಿರದ ದರ್ಗಾ ಹೊಂದಿರುವ ತಿರುಪರಂಕುಂದ್ರಂ ಬೆಟ್ಟದ ಮೇಲೆ ಸಾಂಪ್ರದಾಯಿಕ ಕಾರ್ತಿಕ ದೀಪವನ್ನು ಬೆಳಗಿಸುವ ಬಗ್ಗೆ ಸ್ಥಳೀಯರ ಕೋರಿಕೆಯಂತೆ ನ್ಯಾ.ಜಿ.ಆರ್ ಸ್ವಾಮಿನಾಥನ್ ಅವರು ಆದೇಶ ನೀಡಿದ್ದರು. ನ್ಯಾಯಾಧೀಶರ ಆದೇಶದ ಪ್ರಕಾರ ಡಿಸೆಂಬರ್ 4 ರೊಳಗೆ "ದೀಪಥೂನ್" ಕಂಬದ ಮೇಲೆ ದೀಪವನ್ನು ಬೆಳಗಿಸಬೇಕಿತ್ತು. ದೀಪ ಉರಿಸುವುದು ಮುಸ್ಲಿಂ ಸಮುದಾಯದ ಧಾರ್ಮಿಕ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ಪ್ರತಿಪಾದಿಸಿದ್ದರು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ರಾಜ್ಯ ಸರ್ಕಾರವು ತೀರ್ಪನ್ನು ಜಾರಿಗೆ ತರಲು ನಿರಾಕರಿಸಿದ್ದು ಹಿಂದೂ ಪರ ಗುಂಪುಗಳ ಪ್ರತಿಭಟನೆ, ಪೊಲೀಸರೊಂದಿಗೆ ಘರ್ಷಣೆ, ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
Opposition MPs have initiated impeachment proceedings against Madras High Court judge Justice G.R. Swaminathan, who recently permitted the traditional Karthigai Deepam lamp to be lit atop the stone pillar near the dargah on Tirupparankunram Hill in Tamil Nadu.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm