ಬ್ರೇಕಿಂಗ್ ನ್ಯೂಸ್
11-12-25 04:24 pm HK News Desk ದೇಶ - ವಿದೇಶ
ನವದೆಹಲಿ, ಡಿ.11 : ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಉತ್ತರಾಧಿಕಾರಿ ಯಾರು ಎನ್ನುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಇದೇ 2025 ಸೆಪ್ಟಂಬರ್ 17ಕ್ಕೆ ಮೋದಿಯವರಿಗೆ 75 ವರ್ಷ ತುಂಬಿತ್ತು. ಈ ಬಗ್ಗೆ ಆರೆಸ್ಸೆಸ್ ನಿರ್ಧರಿಸುತ್ತದೆ ಎನ್ನುವ ಊಹಾಪೋಹಗಳ ನಡುವೆಯೇ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಡಾ.ಮೋಹನ್ ಭಾಗವತ್ ಆ ವಿಚಾರದಲ್ಲಿ ಆರೆಸ್ಸೆಸ್ ಪಾತ್ರವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಆರೆಸ್ಸೆಸ್ ದೃಷ್ಟಿಕೋನ ಮತ್ತು ಮುಂದಿನ ದಾರಿ ಎನ್ನುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೋಹನ್ ಭಾಗವತ್, ನರೇಂದ್ರ ಮೋದಿಗೆ ಉತ್ತರಾಧಿಕಾರಿ ಯಾರು ಎನ್ನುವುದನ್ನು ಖುದ್ದು ಮೋದಿಯವರು ಮತ್ತು ಬಿಜೆಪಿ ನಿರ್ಧರಿಸಬೇಕೇ ವಿನಾ ಇದರಲ್ಲಿ ಸಂಘದ ಪಾತ್ರವೇನೂ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿಯ ಮಾತೃ ಸಂಘಟನೆ ಎಂದೇ ಗುರುತಿಸಲ್ಪಡುವ ಆರ್ಎಸ್ಎಸ್, ಬಿಜೆಪಿಯ ಎಲ್ಲಾ ಪ್ರಮುಖ ನಿರ್ಣಯಗಳಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ನರೇಂದ್ರ ಮೋದಿಗೆ ಉತ್ತರಾಧಿಕಾರಿ ವಿಚಾರ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ವಿಚಾರ, ಸಂಘದಲ್ಲಿ ಚರ್ಚೆಯಾಗುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿತ್ತು.
ಮೋದಿಗೆ ಉತ್ತರಾಧಿಕಾರಿ ಯಾರು ಎನ್ನುವ ಪ್ರಶ್ನೆ, ಆರ್ಎಸ್ಎಸ್ ಮುಖ್ಯಸ್ಥರಿಗೆ ವಾರದಲ್ಲಿ ಇದು ಎರಡನೇ ಬಾರಿ ಎದುರಾಗಿತ್ತು. ಇದಕ್ಕೆ, ಬಹಿರಂಗವಾಗಿ ಮೋಹನ್ ಭಾಗವತ್ ಉತ್ತರ ನೀಡಲು ಹೋಗಿರಲಿಲ್ಲ. 75 ವರ್ಷ ತುಂಬಿದವರು, ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿಯಬೇಕು ಎನ್ನುವ ಆಂತರಿಕ ನಿಯಮ ಬಿಜೆಪಿಯಲ್ಲಿತ್ತು.
ನರೇಂದ್ರ ಮೋದಿಯವರ ನಂತರ ಯಾರು ಎನ್ನುವ ಪ್ರಶ್ನೆಗೆ, ನಾನು ಅಥವಾ ರಾಷ್ಟ್ರೀಯ ಸ್ವಯಂಸೇವಕ ಸಂಘ ಉತ್ತರಿಸಲು ಸಾಧ್ಯವಿಲ್ಲ. ಅದನ್ನು, ಖುದ್ದು ಮೋದಿ ಮತ್ತು ಬಿಜೆಪಿಯವರೇ ನಿರ್ಧರಿಸಬೇಕು. ನೂತನವಾಗಿ ಆಯ್ಕೆಯಾಗುವವರಿಗೆ ನಾನು ಕೇವಲ ಶುಭ ಹಾರೈಸಬಲ್ಲೆ ಎಂದು ಮೋಹನ್ ಭಾಗವತ್ ಉತ್ತರವನ್ನು ಕೊಟ್ಟಿದ್ದಾರೆ.
ಕಳೆದ ಆಗಸ್ಟ್ ತಿಂಗಳಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ, 75 ವರ್ಷ ತುಂಬಿದವರು, ಇತರರಿಗೆ ಅವಕಾಶವನ್ನು ಮಾಡಿಕೊಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. 75 ವರ್ಷ ತುಂಬಿದವರು ನಿವೃತ್ತಿ ಆಗಬೇಕೆಂದು ನಾನು ಎಂದೂ ಹೇಳಿರಲಿಲ್ಲ ಎಂದು ಮೋಹನ್ ಭಾಗವತ್ ಆಬಳಿಕ ಸ್ಪಷ್ಟ ಪಡಿಸಿದ್ದರು. ಭಾಗವತ್ ಮತ್ತು ಮೋದಿ ಇಬ್ಬರೂ ಒಂದೇ ವಯಸ್ಸಿನವರು ಎನ್ನುವುದು ವಿಶೇಷ.
Debate has resurfaced over who will succeed Prime Minister Narendra Modi, especially as he will turn 75 on September 17, 2025. Amid speculation that the Rashtriya Swayamsevak Sangh (RSS) would decide his successor, RSS chief Dr. Mohan Bhagwat has issued a clear clarification stating that the Sangh has no role in this matter.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm