ಬ್ರೇಕಿಂಗ್ ನ್ಯೂಸ್
22-12-25 06:32 pm HK News Desk ದೇಶ - ವಿದೇಶ
ಕೊಲ್ಕತ್ತಾ, ಡಿ.22 : ಭಾರತ "ಹಿಂದೂ ರಾಷ್ಟ್ರ" ಎನ್ನುವುದನ್ನು ಸಾಬೀತುಪಡಿಸಲು ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.
ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ನಡೆದ ಆರ್ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, "ಭಾರತೀಯ ಸಂಸ್ಕೃತಿಯನ್ನು ಪ್ರಶಂಸಿಸುವವರು, ಅನುಸರಿಸುವವರು ಇರುವ ವರೆಗೂ ಭಾರತ ಹಿಂದೂ ರಾಷ್ಟ್ರವಾಗಿಯೇ ಇರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎನ್ನುವುದಕ್ಕೆ ಸಂವಿಧಾನದ ಉಲ್ಲೇಖ ಅಗತ್ಯವಿದೆಯೇ? ಈ ಪ್ರಕ್ರಿಯೆ ಎಂದಿನಿಂದ ನಡೆಯುತ್ತಿದೆ ಎಂಬುದು ನಮಗೆ ತಿಳಿದಿಲ್ಲ. ಅದಕ್ಕೆ ಸಾಂವಿಧಾನಿಕ ಅನುಮೋದನೆ ಬೇಕಾಗುತ್ತದೆಯೇ? ಹಿಂದೂಸ್ತಾನವು ಹಿಂದೂ ರಾಷ್ಟ್ರ ಎನ್ನುವುದಕ್ಕೂ ಅಂತಹ ಮಾನ್ಯತೆ ಬೇಕಾಗಿಲ್ಲ. ಭಾರತವನ್ನು ತಮ್ಮ ಮಾತೃಭೂಮಿ ಎಂದು ಪರಿಗಣಿಸುವವರು ಭಾರತೀಯ ಸಂಸ್ಕೃತಿಯನ್ನು ಗೌರವಿಸುತ್ತಾರೆ ಎಂದು ಮೋಹನ್ ಭಾಗವತ್ ನುಡಿದರು.
ಸಂಸತ್ತು ಎಂದಾದರೂ ಸಂವಿಧಾನವನ್ನು ತಿದ್ದುಪಡಿ ಮಾಡುವ ಮೂಲಕ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿದರೆ ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಒಂದು ವೇಳೆ ಈ ರೀತಿ ಮಾಡದಿದ್ದರೂ ಭಾರತ ಹಿಂದೂ ರಾಷ್ಟ್ರವಾಗಿಯೇ ಉಳಿಯಲಿದೆ. ಏಕೆಂದರೆ ಸಮಸ್ತ ಭಾರತೀಯರು ಹಿಂದೂಗಳು ಎಂದು ನಾವು ನಂಬುತ್ತೇವೆ" ಎಂದು ಮೋಹನ್ ಭಾಗವತ್ ಹೇಳಿದರು.
ಹುಟ್ಟಿನ ಆಧಾರದಲ್ಲಿ ಬರುವ ಜಾತಿ ವ್ಯವಸ್ಥೆಯು ಹಿಂದುತ್ವದ ಲಕ್ಷಣವಲ್ಲ ಎಂದು ಸ್ಪಷ್ಟಪಡಿಸಿದ ಭಾಗವತ್, "ಸಂಸ್ಕೃತಿ ಮತ್ತು ಹಿಂದೂ ಧರ್ಮೀಯರ ಸಂಬಂಧಗಳನ್ನು ಗಮನಿಸಿದರೆ, ಭಾರತವು ಆದಿಕಾಲದಿಂದಲೂ ಹಿಂದೂ ರಾಷ್ಟ್ರ ಎನ್ನುವುದು ತಿಳಿಯುತ್ತದೆ. ಆರ್ಎಸ್ಎಸ್ ಹಿಂದಿನಿಂದಲೂ ಇದೇ ಮಾತನ್ನು ಹೇಳುತ್ತ ಬಂದಿದೆ. ಜಾತ್ಯತೀತ ಪದವು ಮೂಲತಃ ಸಂವಿಧಾನದ ಪೀಠಿಕೆಯ ಭಾಗವಾಗಿರಲಿಲ್ಲ. ಅದನ್ನು 1976ರ ಸಂವಿಧಾನದ 42ನೇ ತಿದ್ದುಪಡಿ ಮೂಲ ಸೇರಿಸಲಾಯಿತು ಎಂದು ಭಾಗವತ್ ಇತಿಹಾಸವನ್ನು ನೆನಪಿಸಿದರು.
ಇದೇ ವೇಳೆ ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ದಯನೀಯ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಮೋಹನ್ ಭಾಗವತ್, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಪ್ರತಿಭಟನೆ ನೆಪದಲ್ಲಿ ಹಿಂದೂಗಳನ್ನು ಕೊಲ್ಲುತ್ತಿರುವುದು ಅತ್ಯಂತ ಖಂಡನೀಯ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.
India does not require any constitutional validation to be called a “Hindu Rashtra,” RSS Sarsanghchalak Mohan Bhagwat said at the Rashtriya Swayamsevak Sangh’s centenary celebrations in Kolkata.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm