ಬ್ರೇಕಿಂಗ್ ನ್ಯೂಸ್
26-12-25 02:50 pm HK News Desk ದೇಶ - ವಿದೇಶ
ಮುಂಬೈ, ಡಿ.26 : ಇಬ್ಬರು ಪುತ್ರರು ಮತ್ತು ಹೆತ್ತವರು ಸೇರಿ ಒಂದೇ ಕುಟುಂಬದ ನಾಲ್ವರು ಎರಡು ಪ್ರತ್ಯೇಕ ಸ್ಥಳಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು ದಂಪತಿ ಮನೆಯಲ್ಲಿ ನೇಣು ಬಿಗಿದು ಸಾವನ್ನಪ್ಪಿದ್ದರೆ, ಇಬ್ಬರು ಪುತ್ರರ ಶವ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.
ಪೊಲೀಸರ ಪ್ರಕಾರ, ನಾಂದೇಡ್ ಜಿಲ್ಲೆಯ ಮುದ್ಖೇಡ್ ತಹಸಿಲ್ನಲ್ಲಿರುವ ರಮೇಶ್ ಸೋನಾಜಿ ಲಾಖೆ (51) ಮತ್ತು ಅವರ ಪತ್ನಿ ರಾಧಾಬಾಯಿ ಲಾಖೆ (45) ದಂಪತಿ ಶವಗಳು ಮನೆಯೊಳಗೆ ನೇಣಿಗೆ ಶರಣಾದ ರೀತಿಯಲ್ಲಿ ಪತ್ತೆಯಾಗಿವೆ. ಬೆಳಗ್ಗೆ 8 ಗಂಟೆ ಸುಮಾರಿಗೆ ದಂಪತಿ ಶವ ಕಂಡಿದ್ದರೆ, ಸ್ವಲ್ಪ ಸಮಯದ ನಂತರ ಪುತ್ರರಾದ ಉಮೇಶ್ ಲಾಖೆ (25) ಮತ್ತು ಬಜರಂಗ್ ಲಾಖೆ (23) ಅವರ ಶವಗಳನ್ನು ಹತ್ತಿರದ ರೈಲ್ವೆ ಹಳಿಯಲ್ಲಿ ಪತ್ತೆ ಮಾಡಲಾಗಿದೆ.
ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು ಸಾವಿನ ಬಗ್ಗೆ ಇನ್ನೂ ದೃಢಪಡಿಸಿಲ್ಲ. ಸಂಪೂರ್ಣ ತಾಂತ್ರಿಕ ತನಿಖೆ ಮತ್ತು ಶವಪರೀಕ್ಷೆಯ ನಂತರವೇ ಸತ್ಯ ಹೊರಬರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿನ ಸ್ವರೂಪ ಆತ್ಮಹತ್ಯೆಯಂತೆ ಕಂಡುಬರುತ್ತಿದೆ. ಆರ್ಥಿಕ ಸಂಕಷ್ಟ ಅಥವಾ ಕುಟುಂಬಕ್ಕೆ ಸಮಸ್ಯೆ ಇತ್ತೇ ಎಂಬುದು ತಿಳಿದುಬಂದಿಲ್ಲ.
ಸ್ಥಳೀಯರ ಪ್ರಕಾರ, ಕುಟುಂಬವು ತಮ್ಮ ಜಮೀನನ್ನು ಉತ್ತಮವಾಗಿ ನೋಡಿಕೊಳ್ಳುತ್ತಿತ್ತು. ಯಾವುದೇ ತೊಂದರೆ ಎದುರಾದ ಕುರಿತು ಮಾಹಿತಿ ಇಲ್ಲ. ಘಟನೆಯ ಬಗ್ಗೆ ನಾಂದೇಡ್ ಗ್ರಾಮೀಣ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A heartbreaking incident from Maharashtra’s Nanded district has left an entire family dead in two separate suicide cases. The parents — Ramesh Sonaji Lakhe (51) and his wife Radhabai Lakhe (45) — were found hanging inside their home in Mudkhed taluk early on Thursday morning. Shortly after the discovery, the bodies of their sons, Umesh Lakhe (25) and Bajrang Lakhe (23), were found on nearby railway tracks, indicating they had jumped in front of a moving train.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 05:50 pm
HK News Desk
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm