ಬ್ರೇಕಿಂಗ್ ನ್ಯೂಸ್
26-12-25 03:04 pm HK News Desk ದೇಶ - ವಿದೇಶ
ನವದೆಹಲಿ, ಡಿ.26 : ರೈಲ್ವೇ ಇಲಾಖೆಯು ಒಂದೇ ವರ್ಷದಲ್ಲಿ 2ನೇ ಬಾರಿಗೆ ರೈಲ್ವೇ ಟಿಕೆಟ್ ದರ ಏರಿಕೆ ಮಾಡಿದೆ. ಇದೇ ಡಿಸೆಂಬರ್ 26 ರಿಂದ ರೈಲ್ವೇ ಟಿಕೆಟ್ ದರ ಏರಿಕೆ ಜಾರಿಗೆ ಬರಲಿದೆ. ಪ್ರಯಾಣಿಕರ ಸುರಕ್ಷತೆ, ನಿರ್ವಹಣಾ ವೆಚ್ಚ ಭರಿಸಲು ಟಿಕೆಟ್ ದರ ಏರಿಕೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಹೇಳಿಕೊಂಡಿದೆ.
ದೇಶದಲ್ಲಿ ಕೇವಲ 6 ತಿಂಗಳ ಅಂತರದಲ್ಲಿ ರೈಲ್ವೇ ಇಲಾಖೆ ಟಿಕೆಟ್ ದರ ಏರಿಸಿರುವುದು ಹಲವರ ಆಕ್ಷೇಪಕ್ಕೂ ಕಾರಣವಾಗಿದೆ. ಆದರೇ, ಭಾರೀ ಪ್ರಮಾಣದಲ್ಲಿ ರೈಲ್ವೇ ಟಿಕೆಟ್ ದರ ಏರಿಸುತ್ತಿಲ್ಲ. ಪೈಸೆಗಳ ಲೆಕ್ಕದಲ್ಲಿ ಟಿಕೆಟ್ ದರ ಏರಿಸುವ ತೀರ್ಮಾನ ಕೈಗೊಂಡಿದ್ದಾಗಿ ರೈಲ್ವೇ ಸಮರ್ಥಿಸಿಕೊಂಡಿದೆ. ಕಳೆದ ಜುಲೈನಲ್ಲಿ ಪ್ರಯಾಣ ದರವನ್ನು ಹೆಚ್ಚಿಸಿದ್ದ ರೈಲ್ವೇ, ಇದೀಗ ಮತ್ತೊಮ್ಮೆ ಟಿಕೆಟ್ ದರವನ್ನು ಏರಿಸಿದೆ. ಕನಿಷ್ಠ 215 ಕಿ.ಮೀ ಗಿಂತ ಹೆಚ್ಚಿನ ದೂರದ ಪ್ರಯಾಣಕ್ಕೆ ಸಾಮಾನ್ಯ ದರ್ಜೆಯ ಟಿಕೆಟ್ ದರ ಪ್ರತಿ ಕಿ.ಮೀಗೆ 1 ಪೈಸೆಯಂತೆ ಏರಿಕೆ ಮಾಡಲಾಗಿದೆ. ಎಕ್ಸ್ ಪ್ರೆಸ್, ನಾನ್ ಎ.ಸಿ. ಹಾಗೂ ಎ.ಸಿ ರೈಲುಗಳ ಪ್ರಯಾಣದಲ್ಲಿ ಪ್ರತಿ ಕಿ.ಮೀ.ಗೆ 2 ಪೈಸೆ ಏರಿಕೆ ಮಾಡಲಾಗಿದೆ. ನಾನ್ ಎ.ಸಿ ಬೋಗಿಯಲ್ಲಿ 500 ಕಿ.ಮೀ ದೂರದ ವರೆಗೆ ಪ್ರಯಾಣಿಸುವವರು ಹಾಲಿ ದರಕ್ಕಿಂತ 10 ರೂ. ಹೆಚ್ಚುವರಿ ಪಾವತಿಸಬೇಕು. ಉಪ ನಗರಗಳ ಪ್ರಯಾಣ, ಮಾಸಿಕ ಪಾಸುಗಳ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರೈಲ್ವೇ ಇಲಾಖೆ ಹೇಳಿದೆ.
ಟಿಕೆಟ್ ದರ ಏರಿಕೆಯಿಂದ ರೈಲ್ವೇ ಇಲಾಖೆಗೆ ವರ್ಷಕ್ಕೆ 600 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ಬರಲಿದೆ. ರೈಲ್ವೇ ನೆಟ್ ವರ್ಕ್ ವಿಸ್ತರಣೆ, ರೈಲ್ವೇ ಅಪರೇಷನ್ ವೆಚ್ಚ ಹೆಚ್ಚಳ, ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳದ ಕಾರಣದಿಂದ ರೈಲ್ವೇ ಟಿಕೆಟ್ ದರವನ್ನು ಪೈಸೆಗಳ ಲೆಕ್ಕದಲ್ಲಿ ಏರಿಸುವ ತೀರ್ಮಾನ ಕೈಗೊಳ್ಳಲಾಗಿದೆ. ರೈಲ್ವೇ ಸುರಕ್ಷತೆ, ದಕ್ಷತೆಯ ಹೆಚ್ಚಳಕ್ಕಾಗಿ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ರೈಲ್ವೇ ಇಲಾಖೆಯ ಅಧಿಕಾರಿ, ಸಿಬ್ಬಂದಿಯ ವೇತನವೂ 1.15 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ. ನಿವೃತ್ತ ಸಿಬ್ಬಂದಿ, ಅಧಿಕಾರಿಗಳ ಪಿಂಚಣಿಗಾಗಿ 60,000 ಕೋಟಿ ರೂಪಾಯಿ ನೀಡಬೇಕಾಗಿದೆ. ರೈಲ್ವೇ ನಿರ್ವಹಣಾ ವೆಚ್ಚವು 2024-25 ರಲ್ಲಿ 2.63 ಲಕ್ಷ ಕೋಟಿ ರೂಪಾಯಿಗೆ ಏರಿಕೆಯಾಗಿದೆ ಎಂದು ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.
The Indian Railways has announced another round of fare hikes — the second increase within a span of six months. The revised ticket prices come into effect starting December 26. According to officials, the fare hike is necessary to cover rising operational and maintenance costs and to improve passenger safety.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm