ಬ್ರೇಕಿಂಗ್ ನ್ಯೂಸ್
27-12-25 04:29 pm HK News Desk ದೇಶ - ವಿದೇಶ
ಜೆರುಸಲೇಮ್, ಡಿ.27 : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದ್ದು ಇದರ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇಸ್ರೇಲ್ ಗಡಿಭಾಗದ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ರಸ್ತೆಯ ಪಕ್ಕದಲ್ಲಿ ಪ್ರಾರ್ಥನೆ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ, ರೈಫಲ್ ಹಿಡಿದುಕೊಂಡು ಇಸ್ರೇಲಿ ಮೀಸಲು ಪಡೆಯ ಸೈನಿಕನೊಬ್ಬ ಎಟಿವಿ ವಾಹವನ್ನು ಡಿಕ್ಕಿ ಹೊಡೆಸಿದ್ದಾನೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.


ಶಸ್ತ್ರಸಜ್ಜಿತ ಸೈನಿಕ ಪ್ಯಾಲೆಸ್ತೀನಿಯನ್ ವ್ಯಕ್ತಿಗೆ ವಾಹನದಿಂದ ಡಿಕ್ಕಿ ಹೊಡೆಸಿದ್ದಾರೆ. ನಂತರ ಇಲ್ಲಿಂದ ಹೊರಡುವಂತೆ ಸೂಚಿಸಿದ್ದಾನೆ. ಈತ ಮೀಸಲು ಪಡೆಯ ಸಿಬ್ಬಂದಿಯಾಗಿದ್ದು, ಆ ರೀತಿಯ ಕೃತ್ಯಕ್ಕಾಗಿ ಅವರನ್ನು ಮಿಲಿಟರಿ ಸೇವೆಯಿಂದ ಮುಕ್ತಗೊಳಿಸಲಾಗಿದೆ ಎಂದು ಸೇನೆ ತಿಳಿಸಿದೆ.
ಸೈನಿಕ ತನ್ನ ಅಧಿಕಾರವನ್ನು ಉಲ್ಲಂಘಿಸಿ ಅತಿರೇಕದ ವರ್ತನೆ ತೋರಿಸಿದ್ದಾರೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ವಾಹನ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಗಡಿಭಾಗದಲ್ಲಿ ಪ್ಯಾಲೆಸ್ತೀನಿಯರ ವಿರುದ್ಧ ಈ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿ ಕಡೆಯಿಂದ ದಾಳಿಗಳಾಗಿವೆ. ಘಟನೆಯಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದು 750ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿಶ್ವಸಂಸ್ಥೆ ಅಂಕಿ ಅಂಶಗಳು ತಿಳಿಸಿವೆ.
As we mark Christmas in the land of Christ, Israeli extremists from Gush Emunim continue their attacks on Palestinians.
— George Zeidan جورج زيدان (@gjzeidan) December 25, 2025
Earlier today, a Palestinian kneeling in prayer was run over by a settler east of Ramallah. Despite evidence, the likelihood of real accountability is zero pic.twitter.com/RAGpFn6jnM
A shocking incident from the occupied West Bank has gone viral after an Israeli reserve soldier intentionally rammed an ATV into a Palestinian man who was praying on the roadside. Video footage shows the armed soldier striking the man and then ordering him to leave the area. The Israeli military has confirmed that the soldier violated protocol and has been removed from service, with his weapon confiscated.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 02:28 pm
Bangalore Correspondent
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm