ಬ್ರೇಕಿಂಗ್ ನ್ಯೂಸ್
09-01-26 08:30 pm HK News Desk ದೇಶ - ವಿದೇಶ
ಟೆಹ್ರಾನ್, ಜ.9 : ಇರಾನ್ನಲ್ಲಿ ಅಮೆರಿಕ ಪ್ರೇರಿತ ಹಿಂಸಾಚಾರ, ಪ್ರತಿಭಟನೆ ಭುಗಿಲೆದ್ದಿರುವಾಗಲೇ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೈಗಳು ಇರಾನಿ ಜನರ ರಕ್ತದಿಂದ ತೋಯಿಸಿದೆ. ಇರಾನ್ ಸಾವಿರಾರು ಗೌರವಾನ್ವಿತ ಜನರ ರಕ್ತದಿಂದ ಕಟ್ಟಲ್ಪಟ್ಟಿದೆ. ಯಾವುದೇ ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ರಿಪಬ್ಲಿಕ್ ಬಗ್ಗಲ್ಲ ಎಂದು ಪರೋಕ್ಷವಾಗಿ ಡೊನಾಲ್ಡ್ ಟ್ರಂಪ್ ಗೆ ಎಚ್ಚರಿಕೆ ನೀಡಿದ್ದಾರೆ.
ಇರಾನ್ನಲ್ಲಿ ವಿದೇಶಿ ಬೆಂಬಲಿತ ಪ್ರತಿಭಟನೆ ಅಥವಾ ಭಯೋತ್ಪಾದಕ ಏಜೆಂಟ್ಗಳನ್ನು ಸಹಿಸುವುದಿಲ್ಲ. ಕೆಲವು ಗಲಭೆಕೋರರು ಸರ್ಕಾರಿ ಆಸ್ತಿಗೆ ಹಾನಿ ಮಾಡುವ ಮೂಲಕ ಟ್ರಂಪ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ. ಟ್ರಂಪ್ ತಮ್ಮ ದೇಶದ ಬಗ್ಗೆ ಚಿಂತಿಸಲಿ, ನಮ್ಮ ದೇಶದ ಯುವಜನರು ಇರಾನ್ ಬಗ್ಗೆ ಚಿಂತಿಸಿ. ಇರಾನ್ ವಿದೇಶಿ ಒತ್ತಡಕ್ಕೆ ಮಣಿಯುವುದಿಲ್ಲ ಎನ್ನುವುದನ್ನು ಸಾರಿ ಹೇಳುತ್ತದೆ ಎಂದು ಖಮೇನಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
ಇರಾನ್ ಯುವಕರು ದೇಶದ ಪರವಾಗಿ ಒಂದಾಗಿ ನಿಲ್ಲಬೇಕು. ಬಾಹ್ಯ ಒತ್ತಡಗಳಿಗೆ ಮಣಿಯದೆ ಏಕತೆಯನ್ನು ಕಾಪಾಡಿಕೊಳ್ಳಿ. ಮತ್ತು ಯಾವಾಗಲೂ ಯಾವುದೇ ಸ್ಥಿತಿ ಎದುರಿಸಲು ಸಿದ್ಧರಾಗಬೇಕು. ಏಕೆಂದರೆ ಒಗ್ಗಟ್ಟಿನ ಬಲ ಹೊಂದಿರುವ ಒಂದು ರಾಷ್ಟ್ರವು ಯಾವುದೇ ಶತ್ರು ದೇಶವನ್ನು ಸೋಲಿಸುವ ಶಕ್ತಿಯನ್ನು ಹೊಂದಿರುತ್ತದೆ ಎಂದು ಹೇಳುವ ಮೂಲಕ ಅವರು ಇರಾನಿನ ಯುವಕರನ್ನು ಒಗ್ಗೂಡಿಸಲು ಪ್ರಯತ್ನಿಸಿದ್ದಾರೆ. ಅಮೆರಿಕನ್ ಅಧ್ಯಕ್ಷರ ಕೈಗಳು 1,000ಕ್ಕೂ ಹೆಚ್ಚು ಇರಾನಿಯನ್ನರ ರಕ್ತದ ಕಲೆಗಳಿಂದ ಕೂಡಿವೆ ಎಂದು ಹೇಳುವ ಮೂಲಕ, ಕಳೆದ ಜೂನ್ ತಿಂಗಳಲ್ಲಿ ಇರಾನ್ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಉಲ್ಲೇಖಿಸಿ ಟಾಂಗ್ ನೀಡಿದ್ದಾರೆ. ಅಮೆರಿಕ ನಡೆಸಿದ್ದ ದಾಳಿಯಲ್ಲಿ ಸಾವಿರಕ್ಕೂ ಹೆಚ್ಚು ಇರಾನಿ ಜನರು ಸಾವಿಗೀಡಾಗಿದ್ದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಖಮೇನಿ, ಪ್ರತಿಭಟನಕಾರರು ಅಮೆರಿಕದ ಅಧ್ಯಕ್ಷರನ್ನು ಸಂತೃಪ್ತಿಗೊಳಿಸಲು ಬಯಸಿದ್ದಾರೆ. ಆತನಿಗೆ ತನ್ನ ದೇಶವನ್ನು ಹೇಗೆ ಮುನ್ನಡೆಸಬೇಕೆಂದು ತಿಳಿದಿದ್ದರೆ, ಅದೇ ಕೆಲಸವನ್ನು ಮಾಡುತ್ತಿದ್ದರು. ಅಲ್ಲಿಯೇ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಮೆರಿಕವನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ. ಇರಾನ್ ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ, ಹಿಂಸೆಯಿಂದಾಗಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ.
Amid ongoing protests in Iran, Supreme Leader Ayatollah Ali Khamenei accused US President Donald Trump of having Iranian blood on his hands and warned that Iran will not bow to foreign pressure. He called on Iranian youth to stand united against external interference and condemned what he described as US-backed unrest in the country.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm