ಬ್ರೇಕಿಂಗ್ ನ್ಯೂಸ್
31-12-20 06:21 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಮಗುವಿನ ಆರೋಗ್ಯ ಹದಗೆಡುತ್ತಿರುವ ವಿಷಯ ತಿಳಿದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ತುರ್ತಾಗಿ ಮಧ್ಯಪ್ರದೇಶದ ಇಂಧೋರ್ ನಲ್ಲಿ ಲ್ಯಾಂಡ್ ಮಾಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್ ಪುರದ ದುರ್ಗೇಶ್ ಜೈಸ್ವಾಲ್ ಮತ್ತು ಅನು ಜೈಸ್ವಾಲ್ ದಂಪತಿಯ ಮಗು ದೇವ್ ಜೈಸ್ವಾಲ್ ಗೆ ತೀವ್ರ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ವೈದ್ಯರನ್ನು ಸಂಪರ್ಕಿಸಿದಾಗ, ತುರ್ತಾಗಿ ಕರೆತರುವಂತೆ ತಿಳಿಸಿದ್ದರು. ಹೀಗಾಗಿ ಮಗುವನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ವಿಮಾನದಲ್ಲಿ ಬರುತ್ತಿದ್ದಾಗಲೇ, ಮಗುವಿಗೆ ಆರೋಗ್ಯ ಹದಗೆಟ್ಟಿದ್ದು, ವಿಮಾನದ ಸಿಬಂದಿಗೆ ಹೆತ್ತವರು ತಿಳಿಸಿದ್ದಾರೆ. ಕೂಡಲೇ ಪೈಲಟ್, ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಿ, ತುರ್ತಾಗಿ ವಿಮಾನವನ್ನು ಇಳಿಸುವ ಕಾರ್ಯ ಮಾಡಿದ್ದಾರೆ.

ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಕೂಡಲೇ ಅಲ್ಲಿನ ಸ್ಯಾಮ್ಸ್ ಆಸ್ಪತ್ರೆಗೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಗು ಅಲ್ಲಿ ತಲುಪುವಷ್ಟರಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಐದು ವರ್ಷದ ಮಗುವಿಗೆ ಮೆದುಳಿನಲ್ಲಿ ನೀರು ಒಸರುವ ಜಲಮಸ್ತಿಷ್ಕ ಎನ್ನುವ ರೋಗ ತಗಲಿತ್ತು.
ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಮಗುವನ್ನು ಉಳಿಸುವುದಕ್ಕಾಗಿಯೇ ಇಂದೋರ್ ನಲ್ಲಿ ತುರ್ತಾಗಿ ಇಳಿಸಿದರೂ ಮಗುವನ್ನು ಉಳಿಸಿಕೊಳ್ಳಲು ಮಾತ್ರ ಸಾಧ್ಯವಾಗಲಿಲ್ಲ.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm