ಬ್ರೇಕಿಂಗ್ ನ್ಯೂಸ್
31-12-20 06:21 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.31: ಮಗುವಿನ ಆರೋಗ್ಯ ಹದಗೆಡುತ್ತಿರುವ ವಿಷಯ ತಿಳಿದು ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ತುರ್ತಾಗಿ ಮಧ್ಯಪ್ರದೇಶದ ಇಂಧೋರ್ ನಲ್ಲಿ ಲ್ಯಾಂಡ್ ಮಾಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಗೋರಖ್ ಪುರದ ದುರ್ಗೇಶ್ ಜೈಸ್ವಾಲ್ ಮತ್ತು ಅನು ಜೈಸ್ವಾಲ್ ದಂಪತಿಯ ಮಗು ದೇವ್ ಜೈಸ್ವಾಲ್ ಗೆ ತೀವ್ರ ಅನಾರೋಗ್ಯ ಕಾಡಿತ್ತು. ಬೆಂಗಳೂರಿನ ವೈದ್ಯರನ್ನು ಸಂಪರ್ಕಿಸಿದಾಗ, ತುರ್ತಾಗಿ ಕರೆತರುವಂತೆ ತಿಳಿಸಿದ್ದರು. ಹೀಗಾಗಿ ಮಗುವನ್ನು ತುರ್ತು ಚಿಕಿತ್ಸೆಗಾಗಿ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತರುತ್ತಿದ್ದರು. ವಿಮಾನದಲ್ಲಿ ಬರುತ್ತಿದ್ದಾಗಲೇ, ಮಗುವಿಗೆ ಆರೋಗ್ಯ ಹದಗೆಟ್ಟಿದ್ದು, ವಿಮಾನದ ಸಿಬಂದಿಗೆ ಹೆತ್ತವರು ತಿಳಿಸಿದ್ದಾರೆ. ಕೂಡಲೇ ಪೈಲಟ್, ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣಕ್ಕೆ ಮಾಹಿತಿ ನೀಡಿ, ತುರ್ತಾಗಿ ವಿಮಾನವನ್ನು ಇಳಿಸುವ ಕಾರ್ಯ ಮಾಡಿದ್ದಾರೆ.
ಬುಧವಾರ ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಗುವನ್ನು ಕೂಡಲೇ ಅಲ್ಲಿನ ಸ್ಯಾಮ್ಸ್ ಆಸ್ಪತ್ರೆಗೆ ಒಯ್ಯುವ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಗು ಅಲ್ಲಿ ತಲುಪುವಷ್ಟರಲ್ಲಿ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಐದು ವರ್ಷದ ಮಗುವಿಗೆ ಮೆದುಳಿನಲ್ಲಿ ನೀರು ಒಸರುವ ಜಲಮಸ್ತಿಷ್ಕ ಎನ್ನುವ ರೋಗ ತಗಲಿತ್ತು.
ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದ ವಿಮಾನವನ್ನು ಮಗುವನ್ನು ಉಳಿಸುವುದಕ್ಕಾಗಿಯೇ ಇಂದೋರ್ ನಲ್ಲಿ ತುರ್ತಾಗಿ ಇಳಿಸಿದರೂ ಮಗುವನ್ನು ಉಳಿಸಿಕೊಳ್ಳಲು ಮಾತ್ರ ಸಾಧ್ಯವಾಗಲಿಲ್ಲ.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm