ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm