ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm