ಬ್ರೇಕಿಂಗ್ ನ್ಯೂಸ್
30-01-26 02:04 pm HK News Desk ದೇಶ - ವಿದೇಶ
ಅಹಮದಾಬಾದ್, ಜ.30 : ಚಿರತೆ ದಾಳಿಯಿಂದ ರಕ್ಷಿಸಿಕೊಳ್ಳಲು 60 ವರ್ಷದ ರೈತನೊಬ್ಬ ಚಿರತೆಯನ್ನು ಕತ್ತಿಯಿಂದ ಹಲ್ಲೆ ಮಾಡಿ ಕೊಂದ ಘಟನೆ ಗುಜರಾತಿನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ ನಡೆದಿದೆ. ಆದರೆ ಚಿರತೆ ಕೊಂದ ರೈತನ ವಿರುದ್ಧವೇ ಅರಣ್ಯ ಇಲಾಖೆಯ ಅಧಿಕಾರಿಗಳು ಕೇಸು ದಾಖಲಿಸಿದ್ದಾರೆ.
ಚಿರತೆ ದಾಳಿಯಿಂದ ರೈತನ ಮಗ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ತನಗೆ ಮತ್ತು ಮಗನ ಮೇಲೆ ಚಿರತೆ ದಾಳಿ ನಡೆಸಿದ್ದಕ್ಕೆ ರೈತ ಪ್ರತಿ ದಾಳಿ ನಡೆಸಿದ್ದ. ಆದರೆ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಕೊಂದ ಆರೋಪದಲ್ಲಿ ರೈತ ಬಾಬು ವಾಜಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಗ್ಯಾಂಗ್ಡಾ ಗ್ರಾಮದ ತಮ್ಮ ಮನೆಯ ವರಾಂಡಾದಲ್ಲಿ ಬಾಬು ವಾಜಾ ವಿಶ್ರಾಂತಿ ಪಡೆಯುತ್ತಿದ್ದ ವೇಳೆ, ಸಮೀಪದ ಹೊಲದಿಂದ ಬಂದ ಚಿರತೆಯೊಂದು ಏಕಾಏಕಿ ದಾಳಿ ಮಾಡಿತ್ತು. ಚಿರತೆ ದಾಳಿಯನ್ನು ಕಂಡು ಬಾಬು ಅವರ ಮಗ ಶಾರ್ದೂಲ್ ತಂದೆಯ ರಕ್ಷಿಸಲು ಧಾವಿಸಿದ್ದು, ಚಿರತೆ ಅವನ ಮೇಲೆ ದಾಳಿ ಮಾಡಿತ್ತು. ಈ ವೇಳೆ, ಇಬ್ಬರೂ ಸೇರಿ ಚಿರತೆಯನ್ನು ಹೊಡೆದು ಕೊಂದಿದ್ದರು.
ಘಟನೆ ಕುರಿತು ಮಾತನಾಡಿದ ಬಾಬು ವಾಜಾ, “ಚಿರತೆ ನನ್ನ ತೋಳನ್ನು ಕಚ್ಚಿ ಎಳೆಯಲು ಶುರು ಮಾಡಿತ್ತು. ನನ್ನ ಕಿರುಚಾಟ ಕೇಳಿ ಮಗ ಶಾರ್ದೂಲ್ ಓಡಿ ಬಂದಿದ್ದ. ಚಿರತೆ ಅವನ ಮೇಲೂ ಹಾರಿ ಗಾಯಗೊಳಿಸಿತು. ಮಗನನ್ನು ಉಳಿಸಲು ಯತ್ನಿಸಿದಾಗ ಮತ್ತೆ ನನ್ನ ಮೇಲೆ ದಾಳಿ ಮಾಡಿತು. ಆಗ ಬೇರೆ ದಾರಿ ಇರಲಿಲ್ಲ. ಅಲ್ಲೇ ಇದ್ದ ಕತ್ತಿಯನ್ನು ತೆಗೆದುಕೊಂಡು ಚಿರತೆಗೆ ಹೊಡೆದೆ ಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಬು ಮತ್ತು ಅವರ ಮಗನ ಮುಂಗೈ ಹಾಗೂ ಹಣೆಯ ಭಾಗದಲ್ಲಿ ಗಾಯಗಳಾಗಿವೆ. ವರಾಂಡಾದಲ್ಲಿ ಇಡಲಾಗಿದ್ದ ಕತ್ತಿಯನ್ನೇ ಉಪಯೋಗಿಸಿ ಚಿರತೆಯನ್ನು ಕೊಂದು ಹಾಕಿದ್ದರು. ಘಟನೆಯ ಮಾಹಿತಿ ದೊರಕಿದ ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಚಿರತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
In Gujarat’s Gir Somnath district, a 60-year-old farmer hacked a leopard to death with a machete while trying to save his son from an attack. Though the farmer and his son suffered injuries in the incident, forest department officials have registered a case against him for killing the protected animal, triggering debate over self-defence versus wildlife protection laws.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm