ಬ್ರೇಕಿಂಗ್ ನ್ಯೂಸ್
31-01-26 09:38 pm HK News Desk ದೇಶ - ವಿದೇಶ
ಚೆನ್ನೈ, ಜ.31 : ತಮಿಳುನಾಡಿನ ಕಡಲೂರು ಜಿಲ್ಲೆಯ ಕಡಂಪುಲಿಯೂರು ಗ್ರಾಮದಲ್ಲಿ ಭೀಕರ ಹತ್ಯೆ ನಡೆದಿದ್ದು ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವನನ್ನೇ ಸೊಸೆಯ ಪ್ರಿಯಕರ ಜೀವಂತ ಸುಟ್ಟು ಹಾಕಿದ್ದಾನೆ.
ಮಾಲಿಗಂಪಟ್ಟು ಗ್ರಾಮದ ನಿವಾಸಿ 70 ವರ್ಷದ ರೈತ ರಾಜೇಂದ್ರನ್ ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಹೋಗಿದ್ದಾರೆ. ರಾಜೇಂದ್ರನ್ ಅವರನ್ನು ದುಷ್ಕರ್ಮಿಗಳ ಗುಂಪೊಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿದೆ. ರಾಜೇಂದ್ರನ್ ಅವರು ತಮ್ಮ ಸ್ನೇಹಿತ ಕಂದನ್ ಜೊತೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ವ್ಯಾನ್ನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಅಪಾಯವನ್ನು ಅರಿತ ಕಂದನ್ ಸ್ಥಳದಿಂದ ಪರಾರಿಯಾಗಿದ್ದು, ಒಂಟಿಯಾದ ರಾಜೇಂದ್ರನ್ ಮೇಲೆ ದಾಳಿ ನಡೆಸಿದ ಆರೋಪಿಗಳು ಅವರ ಮೈಮೇಲೆ ಪೆಟ್ರೋಲ್ ಸುರಿದು ಜೀವಂತವಾಗಿ ಬೆಂಕಿ ಹಚ್ಚಿ ಸುಟ್ಟಿದ್ದಾರೆ.
ಬೆಂಕಿಯ ಜ್ವಾಲೆಯಲ್ಲಿ ರಾಜೇಂದ್ರನ್ ನಡು ರಸ್ತೆಯಲ್ಲೇ ಓಡುತ್ತಾ ಸಹಾಯಕ್ಕಾಗಿ ಕಿರುಚಿರುವ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೋಡುಗರ ಎದೆ ನಡುಗಿಸುವಂತಿವೆ. ಹೃದಯವಿದ್ರಾವಕ ಘಟನೆಯ ದೃಶ್ಯಗಳು ಸಿಸಿಟಿವಿಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ.
ಪ್ರಾಥಮಿಕ ತನಿಖೆಯಲ್ಲಿ, ಈ ಹತ್ಯೆಗೆ ಕೌಟುಂಬಿಕ ಕಲಹ ಮತ್ತು ಅನೈತಿಕ ಸಂಬಂಧವೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಂದ್ರನ್ ಅವರ ಸೊಸೆಯೊಂದಿಗೆ ಮಣಿಕಂಠನ್ ಎಂಬ ವ್ಯಕ್ತಿ ಅಕ್ರಮ ಸಂಬಂಧ ಹೊಂದಿದ್ದನೆಂಬ ಆರೋಪಗಳಿವೆ. ಇದನ್ನು ರಾಜೇಂದ್ರನ್ ತೀವ್ರವಾಗಿ ವಿರೋಧಿಸಿದ್ದರಿಂದಲೇ ದ್ವೇಷ ಸಾಧಿಸಲು ಮಣಿಕಂಠನ್ ತನ್ನ ಸಹಚರರೊಂದಿಗೆ ಭೀಕರವಾಗಿ ಕೊಲೆ ಮಾಡಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ. ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು ಮಣಿಕಂಠನ್, ಅವನ ಸಹಚರರು ಹಾಗೂ ರಾಜೇಂದ್ರನ್ ಅವರ ಸೊಸೆ ಸಹಿತ ನಾಲ್ವರನ್ನು ಬಂಧಿಸಿದ್ದಾರೆ.
A 70-year-old farmer was allegedly burnt to death in a shocking incident reported from Kadampuliyur village in Tamil Nadu’s Cuddalore district. Police have arrested four persons, including the victim’s daughter-in-law and her alleged partner, in connection with the case.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm