ಬ್ರೇಕಿಂಗ್ ನ್ಯೂಸ್
02-02-26 10:40 pm HK News Desk ದೇಶ - ವಿದೇಶ
ನವದೆಹಲಿ, ಫೆ.2 : ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ (Offshore Wind Energy) ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ ಅವರು, ಕಡಲನಗರಿ ಮಂಗಳೂರಿನಲ್ಲಿ ಸಮುದ್ರ ತೀರದ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಓಷಿಯಾನೋಗ್ರಫಿ (NIO) ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ 'ವಲಯ-2ರಲ್ಲಿ ಮಂಗಳೂರು ಕರಾವಳಿ' ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚದರ ಕಿ.ಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಕ್ಯಾ. ಚೌಟ ಅವರು ಹೇಳಿದ್ದಾರೆ.
ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಕ್ಯಾ. ಚೌಟ ಅವರು, ಅತ್ಯುತ್ತಮ ಮೂಲಸೌಕರ್ಯ, ಬಹು ಬರ್ತ್ಗಳು, ಹೆಚ್ಚಿನ ಸರಕು ನಿರ್ವಹಣಾ ಸಾಮರ್ಥ್ಯ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳು ಈ ಬಂದರಿನಲ್ಲಿದೆ. ವಿಂಡ್ ಟರ್ಬೈನ್ಗಳಂತಹ ಬೃಹತ್ ಯಂತ್ರೋಪಕರಣಗಳ ಸಾಗಣೆ ಮತ್ತು ಜೋಡಣೆಗೆ ಇಲ್ಲಿ ಪೂರಕ ವ್ಯವಸ್ಥೆಯಿದೆ. ಇದು ಕಡಲ ಪವನ ಇಂಧನ ಯೋಜನೆಗಳ ನಿರ್ವಹಣೆಗೆ ಒಂದು ಪ್ರಮುಖ ಲಾಜಿಸ್ಟಿಕ್ ನೆಲೆಯನ್ನಾಗಿ ಪರಿವರ್ತಿಸಬಹುದು ಎಂದು ಅಭಿಪ್ರಾಯಪಟ್ಟರು.
ಎಂಆರ್ ಪಿಎಲ್, ಒಎಂಪಿಎಲ್, ಯುಪಿಸಿಎಲ್ ಮತ್ತು ಮಂಗಳೂರು ಎಸ್ಇಝಡ್ (MSEZ) ನಂತಹ ಬೃಹತ್ ಕೈಗಾರಿಕೆಗಳ ಕೇಂದ್ರವಾಗಿರುವುದರಿಂದ, ಇಲ್ಲಿ ತಯಾರಾಗುವ ಗ್ರೀನ್ ಎನರ್ಜಿಗೂ ಸ್ಥಳೀಯವಾಗಿಯೇ ದೊಡ್ಡ ಮಟ್ಟದ ಮಾರುಕಟ್ಟೆ ಲಭ್ಯವಿದೆ. ಹೀಗಾಗಿ ಕಡಲ ಪವನ ಶಕ್ತಿ ಉತ್ಪಾದನೆಯಾಗುವ ವಿದ್ಯುತ್ತನ್ನು ನೇರವಾಗಿ ಮಾರಾಟ ಮಾಡಲು ಸುಲಭವಾಗುತ್ತದೆ. ಇವುಗಳೊಂದಿಗೆ ನೇರ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಯೋಜನೆಯ ಆರ್ಥಿಕ ಸುಸ್ಥಿರತೆಯನ್ನು ಕಾಪಾಡಿಕೊಳ್ಳಬಹುದು ಮತ್ತು ತ್ವರಿತ ಅನುಷ್ಠಾನಕ್ಕೂ ಇದು ಸಹಕಾರಿ ಎಂದು ಕ್ಯಾ.ಚೌಟ ಪ್ರತಿಪಾದಿಸಿದ್ದಾರೆ.
ಕರ್ನಾಟಕಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದು, 2025ರ ಆರಂಭದಲ್ಲಿ ರಾಜ್ಯದ ಗರಿಷ್ಠ ವಿದ್ಯುತ್ ಬೇಡಿಕೆ 18,000 ಮೆಗಾವ್ಯಾಟ್ ದಾಟಿದ್ದು, ಇಂತಹ ಸಂದರ್ಭದಲ್ಲಿ ಪರ್ಯಾಯ ಇಂಧನ ಉತ್ಪಾದಿಸುವ ಪವನ ಶಕ್ತಿಯನ್ನು ಉತ್ತೇಜಿಸುವ ಅಗತ್ಯವಿದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗವು ತುಲನಾತ್ಮಕವಾಗಿ ಕಡಿಮೆ ಇದ್ದರೂ, ಅರಬ್ಬಿ ಸಮುದ್ರದಲ್ಲಿ ಕಡಲಾಚೆಯ ಗಾಳಿ ಇಂಧನ ಅಭಿವೃದ್ಧಿಪಡಿಸುವುದು ದಕ್ಷಿಣ ಭಾರತದ ಇಂಧನ ಭದ್ರತೆಗೆ ಅತ್ಯಗತ್ಯವಾಗಿದೆ. ಜೊತೆಗೆ ಬಂಗಾಳ ಕೊಲ್ಲಿಯು ಸದಾ ಚಂಡಮಾರುತದ ಭೀತಿ ಎದುರಿಸುತ್ತಿರುವುದರಿಂದ, ಅರಬ್ಬಿ ಸಮುದ್ರದ ಈ ವಲಯವು ಪವನ ಶಕ್ತಿಯ ಬಲವರ್ಧನೆಗೆ ಹೆಚ್ಚು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.
2030ರ ವೇಳೆಗೆ 500 GW ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಭಾರತದ ಗುರಿಯನ್ನು ತಲುಪಲು ಮಂಗಳೂರು ಪವನ ಶಕ್ತಿ ಉತ್ಪಾದನಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಕ್ಷಣವೇ ಸಂಪನ್ಮೂಲಗಳ ಮೌಲ್ಯಮಾಪನ, ಯೋಜನೆಗಳ ಪ್ರಾಯೋಗಿಕ ಅನುಷ್ಠಾನ ಮತ್ತು ಕೈಗಾರಿಕಾ ಸಮಾಲೋಚನೆಗಳನ್ನು ನಡೆಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನವೀಕರಿಸಬಹುದಾದ ಇಂಧನ ಸಚಿವಾಲಯವನ್ನು ಸಂಸದ ಕ್ಯಾ. ಚೌಟ ಅವರು ಸದನದಲ್ಲಿ ಆಗ್ರಹಿಸಿದ್ದಾರೆ.
Dakshina Kannada MP Capt. Brijesh Chowta has urged the Centre in Lok Sabha to prioritize offshore wind energy production off the Mangaluru coast, citing its vast potential, port infrastructure, and growing power demand. He called for immediate resource assessment and project implementation to support India’s renewable energy goals.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm