ಬ್ರೇಕಿಂಗ್ ನ್ಯೂಸ್
03-02-26 09:06 pm HK News Desk ದೇಶ - ವಿದೇಶ
ನವದೆಹಲಿ, ಫೆ.3 : ಸುಪ್ರೀಂ ಕೋರ್ಟ್ ವಾಟ್ಸಾಪ್ ಜಾಲತಾಣದ 2021ರ ಗೌಪ್ಯತಾ ನೀತಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಅದರ ಮಾಲೀಕ ಮೆಟಾ ಕಂಪನಿಗೆ ಕಠಿಣ ಎಚ್ಚರಿಕೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠವು, “ನೀವು ಭಾರತೀಯ ಬಳಕೆದಾರರ ಖಾಸಗಿತನದ ಜೊತೆಗೆ ಆಟವಾಡಬಾರದು. ನಮ್ಮ ದೇಶದ ನಾಗರಿಕರ ಡೇಟಾವನ್ನು ಹಂಚಿಕೊಳ್ಳಲು ಅವಕಾಶವಿಲ್ಲ. ಗೌಪ್ಯತೆ ಉಳಿಸೋಕೆ ಸಾಧ್ಯವಿಲ್ಲವೆಂದರೆ ಭಾರತದಿಂದ ನಿರ್ಗಮಿಸಿ” ಎಂದು ಖಡಕ್ ಎಚ್ಚರಿಕೆ ನೀಡಿದೆ.
ಒಟಿಟಿ ಮೆಸೇಜಿಂಗ್ ಮಾರುಕಟ್ಟೆಯ ಪ್ರಾಬಲ್ಯವನ್ನು ವಾಟ್ಸಾಪ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವ ಕಾರಣಕ್ಕೆ ಭಾರತೀಯ ಸ್ಪರ್ಧಾ ಆಯೋಗವು ವಾಟ್ಸಾಪ್ ಮತ್ತು ಮೆಟಾಗೆ 213 ಕೋಟಿ ರೂ. ದಂಡ ವಿಧಿಸಿತ್ತು. ಇದನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು ಮೆಟಾ ಸಂಸ್ಥೆಗಳು ಸುಪ್ರೀಂ ಮೆಟ್ಟಿಲೇರಿದ್ದವು. ಸಿಜೆಐ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ್ದು ಗೌಪ್ಯತೆ ಕಾಯ್ದುಕೊಳ್ಳದ ವಾಟ್ಸಾಪ್ ನೀತಿಯನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
"ನೀವು ದೇಶದ ಸಂವಿಧಾನ ಪಾಲಿಸಲು ಸಾಧ್ಯವಿಲ್ಲವೆಂದಾದರೆ, ಭಾರತದಿಂದ ನಿರ್ಗಮಿಸಿ. ಯಾವುದೇ ಭಾರತೀಯ ನಾಗರಿಕರ ಗೌಪ್ಯತೆಯನ್ನು ಹಾನಿಗೊಳಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಎಚ್ಚರಿಸಿದ್ದಾರೆ. ವಾಟ್ಸಾಪ್ ನೀತಿ ಸಾಮಾನ್ಯ ಜನರಿಗೆ ಅರ್ಥವಾಗದ ರೀತಿಯಲ್ಲಿ ರೂಪಿಸಿರುವುದಕ್ಕೂ ಟೀಕಿಸಿದ್ದು ನಮ್ಮಂಥವರಿಗೇ ನಿಮ್ಮ ನೀತಿಗಳು ಅರ್ಥವಾಗುತ್ತಿಲ್ಲ. ಬಿಹಾರದ ಎಲ್ಲಿಯೋ ಗ್ರಾಮೀಣ ಪ್ರದೇಶದ ಬಡ ಮಹಿಳೆ, ಬೀದಿ ವ್ಯಾಪಾರಿ ಅಥವಾ ತಮಿಳುನಾಡಿನ ಯಾವುದೋ ಹಳ್ಳಿ ಜನರಿಗೆ ನಿಮ್ಮ ಗೌಪ್ಯತಾ ನೀತಿ ಅರ್ಥವಾಗುತ್ತದೆಯೇ?” ಎಂದು ಪೀಠ ಪ್ರಶ್ನಿಸಿದೆ.
“ಒಬ್ಬ ವೈದ್ಯರು ಮೂರು ಔಷಧಿಗಳನ್ನು ಕಳುಹಿಸಿದ ಐದೇ ನಿಮಿಷದಲ್ಲಿ ಅದೇ ಔಷಧಿಗಳಿಗೆ ಸಂಬಂಧಿಸಿದ ಜಾಹೀರಾತುಗಳನ್ನು ಸುರಿಸುತ್ತೀರಿ ಎಂದು ಮುಖ್ಯ ನ್ಯಾಯಮೂರ್ತಿಗಳು ತರಾಟೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣಗೊಳ್ಳುವ ವರೆಗೆ ವಾಟ್ಸಾಪ್ ಯಾವುದೇ ಭಾರತೀಯ ಬಳಕೆದಾರರ ಡೇಟಾವನ್ನು ಯಾವ ಕಂಪನಿಯೊಂದಿಗೂ ಹಂಚಿಕೊಳ್ಳಬಾರದು ಎಂದು ಸೂಚಿಸಿದೆ. ಜನರ ಡಾಟಾವನ್ನು ಮಾರಿಕೊಳ್ಳುವ ವಿಚಾರದಲ್ಲಿ ಚೆಲ್ಲಾಟ ಬೇಡ. ನೀವು ಈ ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ. ಇಲ್ಲದಿದ್ದರೆ ಸೆಕೆಂಡ್ ಒಳಗಡೆ ನಿಮ್ಮನ್ನು ದೇಶದಿಂದ ಹೊರಗಟ್ಟಬಲ್ಲೆವು ಅನ್ನುವುದನ್ನು ನೆನಪಿಟ್ಟುಕೊಳ್ಳಿ ಎಂದು ಎಚ್ಚರಿಸಿದರು.
The Supreme Court has strongly criticized WhatsApp’s 2021 privacy policy and warned Meta against compromising Indian users’ data. The court said user privacy cannot be violated and directed that no data be shared during the ongoing hearing. It also questioned the clarity of WhatsApp’s policy and cautioned the company to respect Indian laws or leave the country.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm