ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm