ಬ್ರೇಕಿಂಗ್ ನ್ಯೂಸ್
07-02-26 10:53 pm HK News Desk ದೇಶ - ವಿದೇಶ
ಮುಂಬೈ, ಫೆ.7: ಮುಂಬೈ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯೇ ಮೇಲುಗೈ ಸಾಧಿಸಿದೆ. ಬಿಜೆಪಿ ಸದಸ್ಯೆ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 25 ವರ್ಷಗಳ ಶಿವಸೇನೆ ಅಧಿಪತ್ಯ ಬದಿಗಿಟ್ಟು ಮೊದಲ ಬಾರಿಗೆ ಬಿಜೆಪಿ ಮೇಯರ್ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಘಾಟ್ಕೋಪರ್ ವಾರ್ಡ್ ಕಾರ್ಪೊರೇಟರ್ ಆಗಿರುವ ರಿತು ತಾವ್ಡೆ ಈ ಹಿಂದೆ ಮುಂಬೈ ಪಾಲಿಕೆಯಲ್ಲಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಶಿವಸೇನೆಯ (ಶಿಂಧೆ ಬಣ) ಸಂಜಯ್ ಶಂಕರ್ ಘಾಡಿ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಇವರು ವಾರ್ಡ್ ಸಂಖ್ಯೆ 5 ರಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದರು.
ಉಪ ಮೇಯರ್ ಸ್ಥಾನವನ್ನು ಶಿವಸೇನೆ ಶಿಂಧೆ ಬಣವು ತನ್ನ ನಾಲ್ವರು ಕಾರ್ಪೊರೇಟರ್ಗಳಿಗೆ ಹಂಚಿಕೆ ಮಾಡಲು ನಿರ್ಧರಿಸಿದೆ. ಸಂಜಯ್ ಘಾಡಿ ಮೊದಲ 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದಾರೆ.
2022ರಲ್ಲಿ ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಾಗ, ಮುಂಬೈನಲ್ಲಿ ಏಕನಾಥ್ ಶಿಂಧೆ ಪರವಾಗಿ ನಿಂತ ಪ್ರಮುಖ ನಾಯಕರಲ್ಲಿ ಸಂಜಯ್ ಘಾಡಿ ಒಬ್ಬರಾಗಿದ್ದರು. ಮೈತ್ರಿ ಒಪ್ಪಂದದಂತೆ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಅಧಿಕಾರ ಹಂಚಿಕೊಂಡಿವೆ.
227 ಸದಸ್ಯ ಬಲದ ಮುಂಬೈ ಪಾಲಿಕೆಗೆ ಜನವರಿ 15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ 89 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಶಿವಸೇನೆ ಶಿಂಧೆ ಬಣವು 29 ಸ್ಥಾನಗಳನ್ನು ಪಡೆದಿದ್ದು ಮೈತ್ರಿಕೂಟ 118 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಪಡೆದಿತ್ತು. 1997ರಿಂದ ನಿರಂತರ ಅಧಿಕಾರದಲ್ಲಿದ್ದ ಶಿವಸೇನೆ 65 ಸ್ಥಾನಗಳನ್ನು ಪಡೆದಿತ್ತು. ಇವರ ಮೈತ್ರಿ ಪಕ್ಷಗಳಾದ ಎಂಎನ್ಎಸ್ 6 ಮತ್ತು ಎನ್ ಸಿಪಿ ಒಂದು ಸ್ಥಾನ ಪಡೆದಿತ್ತು. ಕಾಂಗ್ರೆಸ್ 24, ಎಐಎಂಐಎಂ ಎಂಟು, ಎನ್ ಸಿಪಿ (ಅಜಿತ್ ಬಣ) ಮೂರು ಹಾಗೂ ಸಮಾಜವಾದಿ ಪಾರ್ಟಿ ಎರಡು ಸ್ಥಾನ ಗಳಿಸಿದ್ದವು.
ಬೃಹನ್ಮುಂಬಯಿ ಮಹಾನಗರ ಪಾಲಿಕೆ ದೇಶದ ಶ್ರೀಮಂತ ಪಾಲಿಕೆಗಳಲ್ಲಿ ಒಂದಾಗಿದ್ದು ಏಳು ವರ್ಷಗಳ ಬಳಿಕ ಚುನಾವಣೆ ಆಗಿತ್ತು. 2022ರಲ್ಲಿ ಅವಧಿ ಮುಗಿದ ಬಳಿಕ ಪಾಲಿಕೆಗೆ ಆಡಳಿತಾಧಿಕಾರಿ ನೇಮಿಸಲಾಗಿತ್ತು. ಪಾಲಿಕೆಯ 2025-26ರ ಬಜೆಟ್ ಮೊತ್ತ 74 ಸಾವಿರ ಕೋಟಿಯಾಗಿತ್ತು.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm