ಬ್ರೇಕಿಂಗ್ ನ್ಯೂಸ್
12-02-26 01:40 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ಜೂನ್ 2025ರಲ್ಲಿ ಅಹಮದಾಬಾದ್ ಏರ್ಪೋರ್ಟ್ನಿಂದ ಟೇಕಾಫ್ ಆದ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್ ಲೈನರ್ ವಿಮಾನವು ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ವಿಮಾನ ಹಾಸ್ಟೆಲ್ ಮೇಲೆ ಪತನಗೊಂಡಿದ್ದರಿಂದ ವಿಮಾನ ಪ್ರಯಾಣಿಕರು ಹಾಗೂ ಹಾಸ್ಟೆಲ್ನಲ್ಲಿ ಇರುವ ವಿದ್ಯಾರ್ಥಿಗಳು ಸೇರಿ ಒಟ್ಟು 260 ಜನರ ಜೀವ ಹಾನಿಯಾಗಿತ್ತು. ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಮಾತ್ರ ಪವಾಡ ಸದೃಶ ರೀತಿ ಬದುಕುಳಿದಿದ್ದರು.
ಘಟನೆ ನಡೆದು ಒಂಬತ್ತು ತಿಂಗಳು ಕಳೆದಿದ್ದರೂ ಘಟನೆಗೆ ನಿಖರ ಕಾರಣ ಏನು ಎಂಬುದು ಮಾತ್ರ ತಿಳಿದುಬಂದಿಲ್ಲ. ಇದೀಗ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಮತ್ತು ಇಟಾಲಿಯನ್ ದಿನಪತ್ರಿಕೆ Corriere della Sera ವರದಿ ಅನ್ವಯ, ಈ ಪತನ ತಾಂತ್ರಿಕ ದೋಷದಿಂದ ಉಂಟಾಗಿಲ್ಲ, ಬದಲಾಗಿ ಉದ್ದೇಶಪೂರ್ವಕ ಕೃತ್ಯ ಆಗಿರಬಹುದೆಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ.
AAIB ವರದಿ ಪೈಲಟ್ಗಳ ಕಾಕ್ಪಿಟ್ ಸಂಭಾಷಣೆಗಳನ್ನು ಒಳಗೊಂಡಿದ್ದು, ಓರ್ವ ಪೈಲಟ್ "ಯಾಕೆ ಇಂಧನ ಸ್ಥಗಿತಗೊಳಿಸಿದ್ದೀರಾ?" ಎಂದು ಕೇಳಿದರೆ, ಇನ್ನೊಬ್ಬ ಉತ್ತರವಾಗಿ "ನಾನು ಹಾಗೆ ಮಾಡಿಲ್ಲ" ಎಂದು ಪ್ರತಿಕ್ರಿಯಿಸಿದ್ದರು. ಈ ಸಂಭಾಷಣೆಗಳು ಪತನದ ಹಿನ್ನೆಲೆ ಕುರಿತು ಉದ್ದೇಶಪೂರ್ವಕ ಕೃತ್ಯದ ಬಗ್ಗೆ ಅನುಮಾನ ಹುಟ್ಟಿಸಿದೆ.
ವಿಮಾನವು ಇಂಜಿನ್ಗೆ ಇಂಧನ ಪೂರೈಕೆ ಸ್ಥಗಿತಗೊಳ್ಳುವುದರಿಂದ ಪತನಗೊಂಡಿದೆ, ಆದರೆ ಯಾವುದೇ ತಾಂತ್ರಿಕ ದೋಷ ಕಾರಣವಾಗಿಲ್ಲ ಎಂದು ಭಾರತೀಯ ತನಿಖಾಧಿಕಾರಿಗಳು ನಿರ್ಣಯಿಸಿದ್ದಾರೆ. ಭಾರತದ ತಂಡದೊಂದಿಗೆ ಅಮೆರಿಕದ ತಜ್ಞರು ಸಹಾಯ ನೀಡುತ್ತಿದ್ದಾರೆ.
ತನಿಖಾಧಿಕಾರಿಗಳು ಅಂತಿಮ ನಿರ್ಣಯಕ್ಕೆ ಬರಲು ಸಮಯ ಬೇಕಾಗಿದ್ದು, ಈ ಬಗ್ಗೆ ತಜ್ಞರ ಜೊತೆಗೆ ಚರ್ಚೆಗಳು ನಡೆಯುತ್ತಿವೆ. ಪತನದ ವೇಳೆಯ ಕೊನೆಯ ಮಾತುಕತೆಗಳು, ತಾಂತ್ರಿಕ ವೈಫಲ್ಯಗಳು, ಉದ್ದೇಶಪೂರ್ವಕ ಕೃತ್ಯದ ಸಾಧ್ಯತೆ ಕುರಿತಾಗಿ ಅಂತಿಮ ವರದಿಯೊಂದಿಗೆ ಸ್ಪಷ್ಟನೆ ಸಿಗಲಿದೆ.
The 2025 Ahmedabad Air India Dreamliner crash that claimed 260 lives may have been caused by fuel supply being cut off, not a technical failure, according to preliminary findings. Cockpit voice recordings have raised suspicions of possible deliberate action, though investigators say the final conclusion is yet to be made.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 01:40 pm
HK News Desk
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
ಪಾಕಿಸ್ತಾನಕ್ಕೆ ಜ್ಞಾನೋದಯ ; ನಾವು ಅಮೆರಿಕ ನಂಬಿ ಕೆಟ...
11-02-26 06:47 pm
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
12-02-26 05:55 pm
Mangalore Correspondent
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
ಸುರತ್ಕಲ್ ಎನ್ಐಟಿಕೆಯಲ್ಲಿ ಫುಡ್ ಪಾಯ್ಸನ್ ; 120ಕ್ಕು...
12-02-26 03:01 pm
ಶಾಲಾ ಮಕ್ಕಳನ್ನು ತೆರದ ಟಿಪ್ಪರ್ ನಲ್ಲಿ ಪ್ರವಾಸ ಕರೆದ...
12-02-26 11:41 am
12-02-26 02:34 pm
HK News Desk
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm