ಬ್ರೇಕಿಂಗ್ ನ್ಯೂಸ್
12-02-26 10:51 pm HK News Desk ದೇಶ - ವಿದೇಶ
ನವದೆಹಲಿ, ಫೆ.12 : ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯ ರೀತಿಯಲ್ಲೇ ಹಾಡುವುದು ಕಡ್ಡಾಯಗೊಳಿಸಿದ ಕೇಂದ್ರ ಗೃಹ ಸಚಿವಾಲಯದ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್ ವಿರೋಧ ವ್ಯಕ್ತಪಡಿಸಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ, ಎಲ್ಲಾ ಶಾಲೆಗಳಲ್ಲಿ ವಂದೇ ಮಾತರಂ ಗೀತೆಯ ಎಲ್ಲಾ ಆರು ಚರಣಗಳನ್ನು ಹಾಡುವುದನ್ನು ಗೃಹ ಇಲಾಖೆ ಕಡ್ಡಾಯ ಮಾಡಿದ್ದು ಗೀತೆಯನ್ನು ಹಾಡುವಾಗ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೂ ಮುನ್ನ ಆರು ಚರಣಗಳನ್ನು ಹಾಡಬೇಕು ಎಂದು ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.
ಗೃಹ ಇಲಾಖೆಯ ಆದೇಶವನ್ನು 'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಆಕ್ಷೇಪಿಸಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಹೇಳಿದೆ. ಈ ಕುರಿತು ಮಾತನಾಡಿರುವ ಜಮಿಯತ್ ಉಲೆಮಾ-ಇ-ಹಿಂದ್ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ, ವಂದೇ ಮಾತರಂ ಹಾಡುವುದು ಅಥವಾ ನುಡಿಸುವುದಕ್ಕೆ ಮುಸ್ಲಿಮರು ಯಾರು ತಡೆಯುವುದಿಲ್ಲ. ಆದರೆ ಗೀತೆಯ ಕೆಲವು ಪದ್ಯಗಳು ಮಾತೃಭೂಮಿಯನ್ನು ದೇವತೆಯಾಗಿ ಬಿಂಬಿಸುವ ನಂಬಿಕೆಗಳನ್ನು ಆಧರಿಸಿವೆ. ಇದು ಏಕದೇವತಾವಾದಿ ಧರ್ಮಗಳ ಮೂಲಭೂತ ನಂಬಿಕೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಇದು ಅಲ್ಪಸಂಖ್ಯಾತರ ಸಾಂವಿಧಾನಿಕ ಹಕ್ಕುಗಳನ್ನು ಮೊಟಕುಗೊಳಿಸುವ ವ್ಯವಸ್ಥಿತ ಪ್ರಯತ್ನವಾಗಿದೆ."ಮುಸ್ಲಿಮರು ಮಾತ್ರ ಅಲ್ಲಾನನ್ನು ಪೂಜಿಸುತ್ತಾರೆ. ಈ ಗೀತೆ ಹಾಡಲು ಒತ್ತಾಯಿಸುವುದು ಸಂವಿಧಾನದ 25 ನೇ ವಿಧಿ ಮತ್ತು ಸುಪ್ರೀಂ ಕೋರ್ಟ್ನ ಹಲವಾರು ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ" ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಾಡನ್ನು ಕಡ್ಡಾಯಗೊಳಿಸುವುದು ಮತ್ತು ಅದನ್ನು ನಾಗರಿಕರ ಮೇಲೆ ಹೇರಲು ಪ್ರಯತ್ನಿಸುವುದು ದೇಶಭಕ್ತಿಯ ಅಭಿವ್ಯಕ್ತಿಯಲ್ಲ, ಬದಲಿಗೆ ಇದು ಚುನಾವಣಾ ರಾಜಕೀಯ, ಮತೀಯ ಅಜೆಂಡಾ ಮತ್ತು ಕೆಲವು ಮೂಲಭೂತ ಸಮಸ್ಯೆಗಳಿಂದ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶಪೂರ್ವಕ ಪ್ರಯತ್ನ ಎಂದು ಮದನಿ ಹೇಳಿದ್ದಾರೆ.
Jamiat Ulema-e-Hind has expressed strong opposition to the Union Home Ministry’s directive making the singing of all six stanzas of Vande Mataram mandatory at government functions and in all schools. As per the reported order, the song must be sung before the National Anthem, and everyone present must stand during its rendition.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm