ಬ್ರೇಕಿಂಗ್ ನ್ಯೂಸ್
20-02-26 08:45 pm HK News Desk ದೇಶ - ವಿದೇಶ
ನವದೆಹಲಿ, ಫೆ.20: ರಾಜಧಾನಿ ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಇಂಡಿಯಾ AI ಇಂಪ್ಯಾಕ್ಟ್ - 2026 ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು ಈ ವೇಳೆ ಅಲ್ಲಿ ಸೇರಿದ್ದ ಸಾರ್ವಜನಿಕರು ಕಾಂಗ್ರೆಸ್ ಕಾರ್ಯಕರ್ತರನ್ನು ಕಾಲಿನಲ್ಲಿ ಒದ್ದು ಹೊರಕ್ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಬ್ರವರಿ 19ರಿಂದ 21ರ ವರೆಗೆ AI ಇಂಪ್ಯಾಕ್ಟ್ ಶೃಂಗಸಭೆ ನಡೆಯುತ್ತಿದ್ದು 10 ಮಂದಿಯಷ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ನುಗ್ಗಿ ತಮ್ಮ ಶರ್ಟ್ಗಳನ್ನು ತೆಗೆದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಯುಎಸ್ ಒಪ್ಪಂದದ ಮೂಲಕ ಸರ್ಕಾರವು ರಾಷ್ಟ್ರೀಯ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಘಟನೆಯಿಂದ ಹೌಹಾರಿದ ಅಲ್ಲಿ ಸೇರಿದ್ದ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾಲಿನಿಂದ ಒದ್ದು, ಅಟ್ಟಾಟಿಸಿ ಭಾರತ್ ಮಂಟಪದ ಆವರಣದಿಂದ ಹೊರಕ್ಕಟ್ಟಿದ್ದಾರೆ. ಇದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಾರ್ಯಕರ್ತರ ದಿಢೀರ್ ಪ್ರತಿಭಟನೆ ಶೃಂಗಸಭೆಯಲ್ಲಿ ಭದ್ರತಾ ಲೋಪಕ್ಕೂ ಕಾರಣವಾಗಿದೆ. ಪ್ರತಿಭಟನಾಕಾರರು QR-ಕೋಡ್ ಇದ್ದ ಪಾಸ್ಗಳನ್ನು ಪಡೆದು ಒಳಕ್ಕೆ ಪ್ರವೇಶಿಸಿದ್ದಾರೆ ಎಂದು ಹೇಳಲಾಗಿದೆ. ಇದು ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದೆ. ಘಟನೆಗೆ ಸಂಬಂಧಿಸಿ ದೆಹಲಿ ಪೊಲೀಸರು ನಾಲ್ಕು ಮಂದಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದೇ ವೇಳೆ, ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಕಾಂಗ್ರೆಸ್ ಪಾಲಿಗೆ ಎಐ ಸಮಿಟ್ ಅಂದ್ರೆ ಏಂಟಿ ಇಂಡಿಯಾ ಎನ್ನುವಂತಾಗಿದೆ ಎಂದು ಟೀಕೆ ಮಾಡಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am