ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm