ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm