ಬ್ರೇಕಿಂಗ್ ನ್ಯೂಸ್
21-02-26 05:01 pm HK News Desk ದೇಶ - ವಿದೇಶ
ಅಹ್ಮದಾಬಾದ್, ಫೆ.21: 'ಲವ್ ಜಿಹಾದ್’ ತಡೆಯಲು ಗುಜರಾತ್ ಸರ್ಕಾರ ವಿವಾಹ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದ್ದು, ಪ್ರೇಮ ವಿವಾಹಗಳಿಗೂ ಪೋಷಕರ ಅನುಮತಿ ಕಡ್ಡಾಯ ಎನ್ನುವ ಮಾನದಂಡ ಸೇರಿಸಿದೆ. ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.
ಗುಜರಾತ್ ವಿವಾಹ ನೋಂದಣಿ ನಿಯಮಗಳಿಗೆ ತಿದ್ದುಪಡಿ ತರುತ್ತಿದ್ದು, ಇದು ಗೌಪ್ಯತೆ, ಪೋಷಕರ ಒಪ್ಪಿಗೆ ಮತ್ತು ಗುರುತು ಮರೆಮಾಚಿ ವಂಚಿಸುವುದನ್ನು ತಡೆಯುವ ಉದ್ದೇಶ ಹೊಂದಿದೆ. ಪ್ರಸ್ತಾವಿತ ಪ್ರಮಾಣೀಕರಣ ಅವಧಿಯಲ್ಲಿ ಅರ್ಜಿಗಳನ್ನು ಸ್ವೀಕರಿಸಿದ 40 ದಿನಗಳಲ್ಲಿ ಗುರುತಿನ ಚೀಟಿ, ಸಾಕ್ಷಿ ಮತ್ತು ನೋಟರಿ ಪರಿಶೀಲನೆ ಮಾಡಲಾಗುತ್ತದೆ. ವಿವಾಹ ನೋಂದಣಿ ಅರ್ಜಿಗಳನ್ನು ಸ್ವೀಕರಿಸಿದ ಹತ್ತು ದಿನಗಳಲ್ಲಿ ಸಹಾಯಕ ನೋಂದಣಾಧಿಕಾರಿ ಸ್ವತಃ ಪೋಷಕರಿಗೆ ಮಾಹಿತಿ ನೀಡಲಿದ್ದಾರೆ. ಅರ್ಜಿಯನ್ನು ಸಂಬಂಧಪಟ್ಟ ಜಿಲ್ಲೆ ಅಥವಾ ತಾಲೂಕು ನೋಂದಣಾಧಿಕಾರಿಗೆ ಕಳುಹಿಸಬೇಕು. ಪರಿಶೀಲನೆ ಮತ್ತು ಉಪ-ನಿಯಮಗಳ (1 ರಿಂದ 7) ಅನುಸರಣೆಯನ್ನು ಖಚಿತಪಡಿಸಿದ ನಂತರವೇ ಮದುವೆಯನ್ನು ನೋಂದಣಿ ಮಾಡಲಾಗುತ್ತದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಾಂಘ್ವಿ ವಿವರಿಸಿದ್ದಾರೆ.
ವಿಧಾನಸಭೆಯಲ್ಲಿ ಮಂಡಿಸಲಾದ ಈ ಪ್ರಸ್ತಾವನೆ ಪ್ರಕಾರ, ರಾಜ್ಯದಲ್ಲಿ ವಿವಾಹ ನೋಂದಣಿ ಪ್ರಮಾಣಪತ್ರ ಪಡೆಯುವುದು ಕಡ್ಡಾಯವಾಗಲಿದೆ. ಹೊಸ ನಿಯಮದ ಪ್ರಕಾರ, ವಧು-ವರರು ತಮ್ಮ ಹೆತ್ತವರಿಗೆ ಮದುವೆಯ ಬಗ್ಗೆ ತಿಳಿಸಿರುವುದಾಗಿ ಘೋಷಣೆಯನ್ನು ಸಲ್ಲಿಸಬೇಕಾಗುತ್ತದೆ, ಜೊತೆಗೆ ಅವರ ಪೋಷಕರ ಗುರುತಿನ ಪುರಾವೆ, ಫೋನ್ ನಂಬರ್, ವಸತಿ ಪುರಾವೆಗಳು ಸೇರಿದಂತೆ ಇತರ ದಾಖಲೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರೇಮ ವಿವಾಹ ನೋಂದಣಿಗೆ ಅರ್ಜಿ ಸಲ್ಲಿಸಿದ ನಂತರ, ಹುಡುಗಿಯ ಪೋಷಕರಿಗೆ ವಾಟ್ಸಾಪ್ ಮೂಲಕ ವಿವರಗಳನ್ನು ನೀಡಲಾಗುತ್ತದೆ. ಆದರೆ ಅರ್ಜಿ ಸಲ್ಲಿಸಿದ 40 ದಿನಗಳ ನಂತರ ವಿವಾಹ ನೋಂದಣಿ ಪ್ರಮಾಣಪತ್ರವನ್ನು ನೀಡಲಾಗುತ್ತದೆ. 40 ದಿನಗಳ ವಿಳಂಬವು ಬಲವಂತ, ತಪ್ಪು ನಿರೂಪಣೆ ಅಥವಾ ನಕಲಿ ಗುರುತನ್ನು ಪತ್ತೆಹಚ್ಚಲು ಅವಕಾಶ ನೀಡುತ್ತದೆ ಎಂದು ಸರ್ಕಾರ ವಾದಿಸಿದೆ. ಈ ಕ್ರಮವನ್ನು ಸಮರ್ಥಿಸಿಕೊಂಡ ಗೃಹ ಸಚಿವ ಹರ್ಷ ಸಾಂಘ್ವಿ, "ನಾವು ಪ್ರೀತಿಯನ್ನು ವಿರೋಧಿಸುವುದಿಲ್ಲ. ಆದರೆ ಯಾರಾದರೂ 'ಸಲೀಮ್ ಸುರೇಶ್' ಆಗಿ ನಕಲಿ ಗುರುತಿನೊಂದಿಗೆ ಯುವತಿಯನ್ನು ಬಲೆಗೆ ಬೀಳಿಸಲು ಹೋದರೆ, ಅಂತಹ ವಂಚನೆಗೆ ಅವಕಾಶ ನೀಡುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am